ಸಾಂದರ್ಭಿಕ ಚಿತ್ರ 
ದೇಶ

ಪಕ್ಷಗಳ ಚಿಹ್ನೆ ಪ್ರಚಾರಕ್ಕಾಗಿ ಸಾರ್ವಜನಿಕ ಹಣ, ಸ್ಥಳ ಬಳಸುವ ಹಾಗಿಲ್ಲ: ಚುನಾವಣಾ ಆಯೋಗ ಆದೇಶ

ಸಾರ್ವಜನಿಕ ಹಣವನ್ನು ಮತ್ತು ಸರ್ಕಾರದ ಕಾರ್ಯತಂತ್ರಗಳನ್ನು ಪ್ರಚಾರಕ್ಕಾಗಿ ಯಾವುದೇ ರಾಜಕೀಯ...

ನವದೆಹಲಿ: ಸಾರ್ವಜನಿಕ ಹಣವನ್ನು ಮತ್ತು ಸರ್ಕಾರದ ಕಾರ್ಯತಂತ್ರಗಳನ್ನು ಪ್ರಚಾರಕ್ಕಾಗಿ ಯಾವುದೇ ರಾಜಕೀಯ ಪಕ್ಷಗಳು ಬಳಸಿಕೊಳ್ಳುವುದಕ್ಕೆ ಅವಕಾಶವಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.
ರಾಜಕೀಯ ಪಕ್ಷಗಳ ಮತ್ತು ಚುನಾವಣಾ ಆಯೋಗ ಪಕ್ಷಕ್ಕೆ ಮಂಜೂರು ಮಾಡಿದ ಪಕ್ಷದ ಚಿಹ್ನೆಯ ಪ್ರಚಾರಕ್ಕಾಗಿ ಸಾರ್ವಜನಿಕ ಹಣ, ಸ್ಥಳ ಅಥವಾ ಸರ್ಕಾರದ ಕಾರ್ಯತಂತ್ರಗಳನ್ನು ಯಾವುದೇ ರಾಜಕೀಯ ಪಕ್ಷಗಳು ಬಳಸಿಕೊಳ್ಳಬಾರದು ಎಂದು ಆಯೋಗ ನಿರ್ದೇಶನ ನೀಡಿದೆ. ಈ ಕುರಿತು ಚುನಾವಣಾ ಆಯೋಗ ಗುರುತಿಸಲ್ಪಟ್ಟ ರಾಷ್ಟ್ರ ಮತ್ತು ರಾಜ್ಯಗಳ ರಾಜಕೀಯ ಪಕ್ಷಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದೆ.
ಯಾವುದೇ ರಾಜಕೀಯ ಪಕ್ಷಗಳ ಮ್ತತು ಅವುಗಳ ಚುನಾವಣಾ ಚಿಹ್ನೆಗಳ ಪ್ರಚಾರಕ್ಕಾಗಿ ಸಾರ್ವಜನಿಕ ಸ್ಥಳ, ಹಣವನ್ನು ಬಳಸುವುದು ಉಚಿತ ಮತ್ತು ನ್ಯಾಯಯುತ ಚುನಾವಣೆ ಪರಿಕಲ್ಪನೆಗೆ ವಿರುದ್ಧವಾಗಿರುತ್ತದೆ. ಇದಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಚುನಾವಣೆ ಗುರುತು(ಮೀಸಲಾತಿ ಮತ್ತು ಹಂಚುವಿಕೆ) ಆದೇಶ 1968ರ 16ಎಯಡಿ ಕಾನೂನು ಉಲ್ಲಂಘನೆಯಾಗುತ್ತದೆ. 
ಉತ್ತರ ಪ್ರದೇಶದಲ್ಲಿ ಮಾಯಾವತಿ ಸರ್ಕಾರದ ಅವಧಿಯಲ್ಲಿ ಬಹುಜನ ಸಮಾಜ ಪಕ್ಷದ ಚಿಹ್ನೆಯಾದ ಆನೆಯ ಮೂರ್ತಿಯನ್ನು ರಾಜ್ಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಸ್ಥಾಪಿಸಿದ್ದನ್ನು ಪ್ರಶ್ನಿಸಿ ಚುನಾವಣಾ ತಂಡವೊಂದು ಸಲ್ಲಿಸಿದ್ದ ಅರ್ಜಿಯನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ