ಬಿಜೆಪಿ ನಾಯಕ ಶಹ್ನಾವಾಜ್ ಹುಸೇನ್ 
ದೇಶ

ಮಸೂದ್'ಗೆ ಬೆಂಬಲ: ಪಶ್ಚಾತ್ತಾಪ ಪಡಬೇಕಾದ ದಿನ ಮುಂದೆ ಬರಲಿದೆ-ಚೀನಾಗೆ ಬಿಜೆಪಿ

ಉಗ್ರ ಮಸೂದ್ ಅಜರ್'ಗೆ ಬೆಂಬಲ ವ್ಯಕ್ತಪಡಿಸುತ್ತಿರುವ ಚೀನಾಗೆ ಮುಂದೊಂದು ದಿನ ಪಶ್ಚಾತ್ತಾಪ ಪಡಬೇಕಾದ ದಿನ ಬರಲಿದೆ ಎಂದು ಬಿಜೆಪಿ ಭಾನುವಾರ...

ನವದೆಹಲಿ: ಉಗ್ರ ಮಸೂದ್ ಅಜರ್'ಗೆ ಬೆಂಬಲ ವ್ಯಕ್ತಪಡಿಸುತ್ತಿರುವ ಚೀನಾಗೆ ಮುಂದೊಂದು ದಿನ ಪಶ್ಚಾತ್ತಾಪ ಪಡಬೇಕಾದ ದಿನ ಬರಲಿದೆ ಎಂದು ಬಿಜೆಪಿ ಭಾನುವಾರ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ಬಿಜೆಪಿ ನಾಯಕ ಶಹ್ನಾವಾಜ್ ಹುಸೇನ್ ಅವರು, ಮಸೂಜ್ ಅಜರ್'ಗೆ ನಿಷೇಧ ಹೇರಲು ಭಾರತ ಸರ್ಕಾರ ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದೆ. ಆದರೆ, ಚೀನಾ ಮಾತ್ರ ಇದಕ್ಕೆ ತಡೆಯೊಡ್ಡುತ್ತಿದೆ. ಮಸೂದ್ ಬೆಂಬಲ ನೀಡುತ್ತಿರುವ ಚೀನಾಗೆ ಮುಂದೊಂದು ದಿನ ಪಶ್ಚಾತ್ತಾಪ ಪಡಬೇಕಾದ ದಿನ ಬರಲಿದೆ ಎಂದು ಹೇಳಿದ್ದಾರೆ.

ಚೀನಾದೊಂದಿಗೆ ಭಾರತ ಉತ್ತಮ ಸಂಬಂಧವನ್ನು ಉಳಿಸಿಕೊಂಡು ಬಂದಿದೆ. ಉತ್ತಮ ವ್ಯವಹಾರ ಚಟುವಟಿಕೆಗಳನ್ನು ನಡೆಸುತ್ತಿದೆ. ಆದರೂ, ಎರಡೂ ರಾಷ್ಟ್ರಗಳ ನಡುವೆ ಸಾಕಷ್ಟು ಸಮಸ್ಯೆಗಳಿವೆ. ಉಭಯ ದೇಶಗಳ ನಡುವೆ ಅಪಶ್ರುತಿಗಳು ಕೇಳಿಬರುತ್ತಿವೆ ಎಂದು ತಿಳಿಸಿದ್ದಾರೆ.

ನಿನ್ನಯಷ್ಟೇ ಮಸೂದ್ ಅಜರ್ ಗೆ ನೀಡುತ್ತಿರುವ ಬೆಂಬಲವನ್ನು ಸಮರ್ಥಿಸಿಕೊಂಡಿದ್ದ ಚೀನಾ, ಮಸೂದ್ ವಿಚಾರ ಕುರಿತಂತೆ ಭಾರತದ ಸಲ್ಲಿಸಿರುವ ಮನವಿಯಲ್ಲಿ ಗೊಂದಲಗಳಿರುವುದರಿಂದ ತಾಂತ್ರಿಕವಾಗಿ ತಡೆ ನೀಡುವ ಮೂಲಕ ಗೊಂದಲ ಬಗೆಹರಿಸಲು ಕಾಲಾವಕಾಶವನ್ನು ಮಾಡಿಕೊಡಲಾಗಿದೆ ಎಂದು ಹೇಳಿತ್ತು. ವಿಶ್ವಸಂಸ್ಥೆಯಲ್ಲಿ ಚೀನಾ ಹೊರತುಪಡಿಸಿದರೆ ಭದ್ರತಾ ಸಮಿತಿಯ 14 ದೇಶಗಳು ಈಗಾಗಲೇ ಭಾರತದ ಮನವಿಗೆ ಸಮ್ಮತಿ ಸೂಚಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT