ಬಿಜೆಪಿ ನಾಯಕ ಶಹ್ನಾವಾಜ್ ಹುಸೇನ್ 
ದೇಶ

ಮಸೂದ್'ಗೆ ಬೆಂಬಲ: ಪಶ್ಚಾತ್ತಾಪ ಪಡಬೇಕಾದ ದಿನ ಮುಂದೆ ಬರಲಿದೆ-ಚೀನಾಗೆ ಬಿಜೆಪಿ

ಉಗ್ರ ಮಸೂದ್ ಅಜರ್'ಗೆ ಬೆಂಬಲ ವ್ಯಕ್ತಪಡಿಸುತ್ತಿರುವ ಚೀನಾಗೆ ಮುಂದೊಂದು ದಿನ ಪಶ್ಚಾತ್ತಾಪ ಪಡಬೇಕಾದ ದಿನ ಬರಲಿದೆ ಎಂದು ಬಿಜೆಪಿ ಭಾನುವಾರ...

ನವದೆಹಲಿ: ಉಗ್ರ ಮಸೂದ್ ಅಜರ್'ಗೆ ಬೆಂಬಲ ವ್ಯಕ್ತಪಡಿಸುತ್ತಿರುವ ಚೀನಾಗೆ ಮುಂದೊಂದು ದಿನ ಪಶ್ಚಾತ್ತಾಪ ಪಡಬೇಕಾದ ದಿನ ಬರಲಿದೆ ಎಂದು ಬಿಜೆಪಿ ಭಾನುವಾರ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ಬಿಜೆಪಿ ನಾಯಕ ಶಹ್ನಾವಾಜ್ ಹುಸೇನ್ ಅವರು, ಮಸೂಜ್ ಅಜರ್'ಗೆ ನಿಷೇಧ ಹೇರಲು ಭಾರತ ಸರ್ಕಾರ ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದೆ. ಆದರೆ, ಚೀನಾ ಮಾತ್ರ ಇದಕ್ಕೆ ತಡೆಯೊಡ್ಡುತ್ತಿದೆ. ಮಸೂದ್ ಬೆಂಬಲ ನೀಡುತ್ತಿರುವ ಚೀನಾಗೆ ಮುಂದೊಂದು ದಿನ ಪಶ್ಚಾತ್ತಾಪ ಪಡಬೇಕಾದ ದಿನ ಬರಲಿದೆ ಎಂದು ಹೇಳಿದ್ದಾರೆ.

ಚೀನಾದೊಂದಿಗೆ ಭಾರತ ಉತ್ತಮ ಸಂಬಂಧವನ್ನು ಉಳಿಸಿಕೊಂಡು ಬಂದಿದೆ. ಉತ್ತಮ ವ್ಯವಹಾರ ಚಟುವಟಿಕೆಗಳನ್ನು ನಡೆಸುತ್ತಿದೆ. ಆದರೂ, ಎರಡೂ ರಾಷ್ಟ್ರಗಳ ನಡುವೆ ಸಾಕಷ್ಟು ಸಮಸ್ಯೆಗಳಿವೆ. ಉಭಯ ದೇಶಗಳ ನಡುವೆ ಅಪಶ್ರುತಿಗಳು ಕೇಳಿಬರುತ್ತಿವೆ ಎಂದು ತಿಳಿಸಿದ್ದಾರೆ.

ನಿನ್ನಯಷ್ಟೇ ಮಸೂದ್ ಅಜರ್ ಗೆ ನೀಡುತ್ತಿರುವ ಬೆಂಬಲವನ್ನು ಸಮರ್ಥಿಸಿಕೊಂಡಿದ್ದ ಚೀನಾ, ಮಸೂದ್ ವಿಚಾರ ಕುರಿತಂತೆ ಭಾರತದ ಸಲ್ಲಿಸಿರುವ ಮನವಿಯಲ್ಲಿ ಗೊಂದಲಗಳಿರುವುದರಿಂದ ತಾಂತ್ರಿಕವಾಗಿ ತಡೆ ನೀಡುವ ಮೂಲಕ ಗೊಂದಲ ಬಗೆಹರಿಸಲು ಕಾಲಾವಕಾಶವನ್ನು ಮಾಡಿಕೊಡಲಾಗಿದೆ ಎಂದು ಹೇಳಿತ್ತು. ವಿಶ್ವಸಂಸ್ಥೆಯಲ್ಲಿ ಚೀನಾ ಹೊರತುಪಡಿಸಿದರೆ ಭದ್ರತಾ ಸಮಿತಿಯ 14 ದೇಶಗಳು ಈಗಾಗಲೇ ಭಾರತದ ಮನವಿಗೆ ಸಮ್ಮತಿ ಸೂಚಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT