ನರೇಂದ್ರ ಮೋದಿ 
ದೇಶ

ದೀನ್ ದಯಾಳ್ ಉಪಾಧ್ಯಾಯ ತತ್ವಕ್ಕೆ ಸಂಬಂಧಿಸಿದ 15 ಕೃತಿಗಳನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅ.9 ರಂದು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರಿಗೆ ಅರ್ಪಿಸಲಾಗಿರುವ ಕೃತಿಗಳನ್ನು ಬಿಡುಗಡೆ ಮಾಡಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅ.9 ರಂದು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರಿಗೆ ಅರ್ಪಿಸಲಾಗಿರುವ ಕೃತಿಗಳನ್ನು ಬಿಡುಗಡೆ ಮಾಡಿದ್ದಾರೆ.

ದೀನ್ ದಯಾಳ್ ಉಪಾಧ್ಯಾಯ ಅವರ ತತ್ವಗಳಿಗೆ, ಜೀವನಕ್ಕೆ ಸಂಬಂಧಿಸಿದ 15 ಸಂಪುಟಗಳ ಕೃತಿಗಳನ್ನು ಬಿಡುಗಡೆಯಾಗಿದ್ದು, ಇದರಲ್ಲಿ ಜನಸಂಘದ ಬೆಳವಣಿಗೆ, 1965 ರಲ್ಲಿ ನಡೆದ ಭಾರತ- ಪಾಕಿಸ್ತಾನ ಯುದ್ಧ ತಾಷ್ಕೆಂಟ್ ಒಪ್ಪಂದ, ಗೋವಾ ವಿಮೋಚನೆ ಸೇರಿದಂತೆ ದೇಶಕ್ಕೆ ಸಂಬಂಧಿಸಿದ ಪ್ರಮುಖ ಘಟನಾವಳಿಗಳ ಬಗ್ಗೆ ಮಾಹಿತಿ ನೀಡಲಾಗಿದೆ.  1967 ರಲ್ಲಿ ಜನಸಂಘದ ಅಧ್ಯಕ್ಷರಾದ ಬೆನ್ನಲ್ಲೇ ದೀನ್ ದಯಾಳ್ ಉಪಾಧ್ಯಾಯ ಅವರ ಹತ್ಯೆಯನ್ನು ಸಹ ಅ.9 ರಂದು ಬಿಡುಗಡೆಯಾಗಿರುವ ಕೃತಿಯಲ್ಲಿ ಉಲ್ಲೇಖಿಸಲಾಗಿದೆ. ಪ್ರಭಾತ್ ಪಬ್ಲಿಕೇಷನ್ಸ್ ಹಾಗೂ ಅಖಂಡ ಮಾನವತಾವಾದಕ್ಕಾಗಿರುವ ಸಂಶೋಧನೆ ಹಾಗೂ ಅಭಿವೃದ್ಧಿ ಸಂಘಟನೆ ಸಹಭಾಗಿತ್ವದಲ್ಲಿ 15 ಕೃತಿಗಳು ಪ್ರಕಟವಾಗಿದ್ದು, ಇದರಲ್ಲಿ ಭಾರತೀಯ ನೆಲೆಗಟ್ಟಿನಲ್ಲಿ ಹಲವಾರು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ದೀನ್ ದಯಾಳ್  ಉಪಾಧ್ಯಾಯ ಅವರು ಪ್ರತಿಪಾದನೆಯ ಬಗ್ಗೆಯೂ ವಿಮರ್ಶೆ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT