ಸಮಾಜವಾದಿ ಪಕ್ಷದ ಹೋರ್ಡಿಂಗ್ 
ದೇಶ

ಮೋದಿಗೆ ಸರ್ಜಿಕಲ್ ದಾಳಿ ನಡೆಸಲು ಸಲಹೆ ನೀಡಿದ್ದು ಮುಲಾಯಂ ಸಿಂಗ್ ಯಾದವ್ !

ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರ ಸಲಹೆ ಪಡೆದ ನಂತರ ಪ್ರಧಾನಿ ನರೇಂದ್ರ ಮೋದಿ ಪಿಒಕೆಯಲ್ಲಿ ಸರ್ಜಿಕಲ್ ದಾಳಿ ನಡೆಸಲು ....

ಮೀರತ್: ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರ ಸಲಹೆ ಪಡೆದ ನಂತರ ಪ್ರಧಾನಿ ನರೇಂದ್ರ ಮೋದಿ ಪಿಒಕೆಯಲ್ಲಿ ಸರ್ಜಿಕಲ್ ದಾಳಿ ನಡೆಸಲು ಆದೇಶಿಸಿದರು ಎಂಬ ಹೋರ್ಡಿಂಗ್ ಅನ್ನು ಉತ್ತರ ಪ್ರದೇಶದಲ್ಲಿ ಹಾಕಲಾಗಿದೆ

ಮುಜಫರ್​ನಗರದ ಸಮಾಜವಾದಿ ಯುವ ಸಭಾದ ನಾಯಕ ಮೊಹಮ್ಮದ್ ಶಮೀರ್ ಮಲಿಕ್ ಎಂಬಾತ ಹೋರ್ಡಿಂಗ್ ಮಾಡಿಸಿ ಹಾಕಿದ್ದಾನೆ. ಇದರಲ್ಲಿ ಮುಲಾಯಂ ಸಿಂಗ್ ಮತ್ತು ಉತ್ತರ ಪ್ರದೇಶದ ಸಿಎಂ ಅಖಿಲೇಶ್ ಯಾದವ್ ಅವರ ಫೋಟೋ ಹಾಕಿದ್ದು, ಭಾರತೀಯ ಸೇನೆಗೆ ಧನ್ಯವಾದ ಅರ್ಪಿಸಲಾಗಿದೆ.

ಜತೆಗೆ ಮುಲಾಯಂ ಸಿಂಗ್ ಅವರ ಸಲಹೆ ಪಡೆದ ನಂತರವಷ್ಟೇ ಮೋದಿ ಸೀಮಿತ ದಾಳಿ ನಡೆಸಲು ಅನುಮತಿ ನೀಡಿದ್ದರು ಎಂದು ಬರೆಯಲಾಗಿದೆ. ನೇತಾಜಿ (ಮುಲಾಯಂ) ಈ ಹಿಂದೆ ರಕ್ಷಣಾ ಸಚಿವರಾಗಿದ್ದರು. ಹಾಗಾಗಿ ಅವರಿಗೆ ಗಡಿಯಲ್ಲಿ ಉಗ್ರರ ಚಟುವಟಿಕೆಗಳು ಮತ್ತು ಸೇನೆಯ ಕುರಿತು ಸಾಕಷ್ಟು ಮಾಹಿತಿ ಗೊತ್ತಿದೆ ಎಂದು ಮಾದ್ಯಗಳಿಗೆ ಆತ ತಿಳಿಸಿದ್ದಾಗಿ ವರದಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

SCROLL FOR NEXT