ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ (ಸಂಗ್ರಹ ಚಿತ್ರ) 
ದೇಶ

'ನಿಮ್ಮ ಆರೋಪವನ್ನು ಸಾಬೀತುಪಡಿಸಿ, ಇಲ್ಲವೇ ಸುಮ್ಮನಿರಿ': ಮನೋಹರ್ ಪರಿಕ್ಕರ್ ಗೆ ಕಾಂಗ್ರೆಸ್ ತಿರುಗೇಟು

ಯುಪಿಎ ಆಡಳಿತ ಸಂದರ್ಭದಲ್ಲಿ ಹೆಲಿಕಾಪ್ಟರ್ ಮತ್ತು ಜಲಾಂತರ್ಗಾಮಿ ದಲ್ಲಾಳಿಯಲ್ಲಿ ತೊಡಗಿತ್ತು ಎಂಬ...

ನವದೆಹಲಿ: ಯುಪಿಎ ಆಡಳಿತ ಸಂದರ್ಭದಲ್ಲಿ ಹೆಲಿಕಾಪ್ಟರ್ ಮತ್ತು ಜಲಾಂತರ್ಗಾಮಿ ದಲ್ಲಾಳಿಯಲ್ಲಿ ತೊಡಗಿತ್ತು ಎಂಬ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಆರೋಪಗಳನ್ನು ಸಾಬೀತುಪಡಿಸಲು ಸಾಕಷ್ಟು ಪುರಾವೆಗಳಿದ್ದರೆ ತೋರಿಸಲಿ ಎಂದು ತಿರುಗೇಟು ನೀಡಿದೆ.
ದಲ್ಲಾಳಿ ನಡೆದಿದ್ದರೆ ನಮ್ಮ ವಿರುದ್ಧ ಕ್ರಮ ಕೈಗೊಳ್ಳಿ.ಯುಪಿಎ ಆಡಳಿತಾವಧಿಯಲ್ಲಿ 1.76 ಕೋಟಿ ರೂಪಾಯಿಗಳ ದಲ್ಲಾಳಿ ನಡೆದಿದೆ ಎಂದು ರಕ್ಷಣಾ ಸಚಿವರು ಹೇಳಿದ್ದಾರೆ. ಅದು ನಿಜವೇ ಆಗಿದ್ದರೆ ನಮ್ಮ ವಿರುದ್ಧ ಎಫ್ ಐಆರ್ ದಾಖಲಿಸಲಿ. ಕೇವಲ ಆರೋಪಗಳಿಂದ ಸಾಕಾಗುವುದಿಲ್ಲ. ಅವರು ಮಾಧ್ಯಮಗಳಿಗೆ ಹಣ ಕೊಟ್ಟಿದ್ದಾರೆ, ಹಾಗಾಗಿ ಅವರನ್ನು ಯಾರೂ ಪ್ರಶ್ನಿಸುವುದಿಲ್ಲ. ಸರ್ಕಾರ ಆಧಾರರಹಿತ ಆರೋಪಗಳನ್ನು ಮಾಡಲು ಸಾಧ್ಯವಿಲ್ಲ. ಸಾಕ್ಷಿಗಳನ್ನು ಒದಗಿಸುವುದು ಅವರ ಕರ್ತವ್ಯ. ಅವರಲ್ಲಿ ಅಷ್ಟು ಸಾಮರ್ಥ್ಯವಿದ್ದರೆ ನಮ್ಮನ್ನು ಕೋರ್ಟ್ ಗೆ ಕರೆದೊಯ್ಯಲಿ. ಇಲ್ಲದಿದ್ದರೆ ಸುಮ್ಮನೆ ಕೂರಲಿ ಎಂದು ಕಾಂಗ್ರೆಸ್ ಮುಖಂಡ ಸಂದೀಪ್ ದೀಕ್ಷಿತ್ ಎಎನ್ ಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಯುಪಿಎ ಸರ್ಕಾರದಲ್ಲಿನ ಹಗರಣಗಳನ್ನು ಉಲ್ಲೇಖಿಸಿ, ''2006ರಲ್ಲಿ ಜಲಾಂತರ್ಗಾಮಿ ನೌಕೆ ದಲ್ಲಾಳಿ ನಡೆದಿತ್ತು.ಹೆಲಿಕಾಪ್ಟರ್ ನ ದಲ್ಲಾಳಿ ಕೂಡ ಆಗಿತ್ತು'' ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಆರೋಪಿಸಿದ್ದರು. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಿ ಮೋದಿ ವಿರುದ್ಧ ರಕ್ತದ ದಲ್ಲಾಳಿ ಎಂದು ಆರೋಪಿಸಿದ್ದಕ್ಕೆ ಪರಿಕ್ಕರ್ ಈ ಪ್ರತಿಕ್ರಿಯೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT