ಸಾಂದರ್ಭಿಕ ಚಿತ್ರ 
ದೇಶ

ಕೇರಳ: ಕಣ್ಣೂರಿನಲ್ಲಿ ಬಿಜೆಪಿ ಕಾರ್ಯಕರ್ತನ ಕಗ್ಗೊಲೆ

ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತನನ್ನು ಹತ್ಯೆ ಮಾಡಲಾಗಿದೆ. ಆಡಳಿತಾರೂಢ ಸಿಪಿಎಂ ಪಕ್ಷದ ಕಾರ್ಯಕರ್ತನ ಕೊಲೆ ನಡೆದ ಎರಡು ದಿನಗಳ ನಂತರ ...

ಕಣ್ಣೂರು: ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತನನ್ನು ಹತ್ಯೆ ಮಾಡಲಾಗಿದೆ. ಆಡಳಿತಾರೂಢ ಸಿಪಿಎಂ ಪಕ್ಷದ ಕಾರ್ಯಕರ್ತನ ಕೊಲೆ ನಡೆದ ಎರಡು ದಿನಗಳ ನಂತರ ಬಿಜೆಪಿ ಕಾರ್ಯಕರ್ತನ ಹತ್ಯೆ ನಡೆದಿರುವುದು ಹಲವು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ. ಸೇಡಿಗಾಗಿ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ,

ಕಾರ್ಯಕರ್ತನ ಕೊಲೆಯಲ್ಲಿ ಸಿಪಿಎಂ ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದೆ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಸೋಮವಾರ 52 ವರ್ಷದ ಸಿಪಿಎಂ ಕಾರ್ಯಕರ್ತ ಮೋಹನನ್ ಎಂಬಾತನನ್ನು ಜನಜಂಗುಳಿಯಿದ್ದ ಮಾರುಕಟ್ಟೆಯ ಆತನ ಸಾರಾಯಿ ಅಂಗಡಿಯಲ್ಲೇ ಐವರು ದುಶ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದರು.

ಕೊಲೆ ಮಾಡಲು ಬಂದಿದ್ದ ಆವರು ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಕೊಲೆಯ ಹಿಂದೆ ಬಿಜೆಪಿ ಕಾರ್ಯಕರ್ತರ ಕೈವಾಡವಿದೆ ಎಂದು ಸಿಪಿಎಂ ಆರೋಪಿಸಿತ್ತು. ಕೊಲೆ ಹಿನ್ನೆಲೆಯಲ್ಲಿ ನಾಳೆ ಕಣ್ಣೂರ್ ಬಂದ್ ಗೆ ಸಿಪಿಎಂ ಕರೆ ನೀಡಿದೆ.

ಕಳೆದ ಮೇನಲ್ಲಿ ಎಡಪಕ್ಷ ಅಧಿಕಾರಕ್ಕೆ ಬಂದ ಮೇಲೆ ರಾಜಕೀಯ ಹಿಂಸಾಚಾರ ಹೆಚ್ಚಿದ್ದು ಸುಮಾರು 300 ರಾಜಕೀಯ ಸಂಬಂಧಿತ ಹಿಂಸಾಚಾರ ನಡೆದಿವೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT