ಪ್ಯಾಂಪೋರ್ ನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ 
ದೇಶ

ಪ್ಯಾಂಪೋರ್ ನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ, ಹತ್ಯೆಯಾದ ಇಬ್ಬರು ಲಷ್ಕರ್-ಎ-ತೊಯ್ಬಾ ಉಗ್ರರು: ಸೇನೆ

ಜಮ್ಮು-ಕಾಶ್ಮೀರದ ಪ್ಯಾಂಪೋರ್ ನ ಹೊರವಲಯದ ಸರ್ಕಾರಿ ಕಚೇರಿ ಬಳಿ ಕಳೆದ ಮೂರು ದಿನಗಳಿಂದ ಉಗ್ರರು- ಭಾರತೀಯ ಸೇನೆ ನಡುವೆ ನಡೆಯುತ್ತಿದ್ದ ಗುಂಡಿನ ಕಾಳಗ ಅಂತ್ಯಗೊಂಡಿದ್ದು, ಸೇನಾ ಕಾರ್ಯಾಚರಣೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ ಎಂದು ಸೇನೆ ಹೇಳಿದೆ.

ಶ್ರೀನಗರ: ಜಮ್ಮು-ಕಾಶ್ಮೀರದ ಪ್ಯಾಂಪೋರ್ ನ ಹೊರವಲಯದ ಸರ್ಕಾರಿ ಕಚೇರಿ ಬಳಿ ಕಳೆದ ಮೂರು ದಿನಗಳಿಂದ ಉಗ್ರರು- ಭಾರತೀಯ ಸೇನೆ ನಡುವೆ ನಡೆಯುತ್ತಿದ್ದ ಗುಂಡಿನ ಕಾಳಗ ಅಂತ್ಯಗೊಂಡಿದ್ದು, ಸೇನಾ ಕಾರ್ಯಾಚರಣೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ ಎಂದು ಸೇನೆ ಹೇಳಿದೆ.
ಸೇನಾಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿರುವ ಸೇನಾ ಅಧಿಕಾರಿ ಅಶೋಕ್ ನರುಲಾ ಸರ್ಕಾರಿ ಕಟ್ಟಡಕ್ಕೆ ಹೆಚ್ಚು ಹಾನಿ ಸಂಭವಿಸದಂತೆ ಎಚ್ಚರಿಕೆ ವಹಿಸಿ ಕಾರ್ಯಾಚರಣೆ ನಡೆಸಲಾಗಿದೆ. ಸೇನೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದು, ಎರಡು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ, ಉಗ್ರರಿಂದ ವಶಪಡಿಸಿಕೊಳ್ಳಲಾದ ಉಳಿದ ವಸ್ತುಗಳ ಬಗ್ಗೆ ನಂತರ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಸರ್ಕಾರಿ ಕಟ್ಟಡಕ್ಕೆ ಹಾನಿ ಸಂಭವಿಸದಂತೆ ಸಾಕಷ್ಟು ಎಚ್ಚರ ವಹಿಸಲಾಗಿತ್ತು. ಕಟ್ಟಡದಲ್ಲಿ 60 ಕೊಠಡಿಗಳಿದ್ದ ಕಾರಣ ಕಾರ್ಯಾಚರಣೆಯನ್ನು ಮುಕ್ತಾಯಗೊಳಿಸಲು ಸಾಕಷ್ಟು ಸಮಯ ತೆಗೆದುಕೊಳ್ಳಬೇಕಾಯಿತು ಎಂದು ಸೇನಾ ಅಧಿಕಾರಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಹತ್ಯೆಯಾಗಿರುವ ಉಗ್ರರು ಮೇಲ್ನೋಟಕ್ಕೆ ಲಷ್ಕರ್ ಉಗ್ರ ಸಂಘಟನೆಗೆ ಸೇರಿದವರೆಂದು ತಿಳಿದುಬಂದಿದೆ ಎಂದು ಸೇನೆ ಹೇಳಿದೆ. ಜಮ್ಮು-ಕಾಶ್ಮೀರದ ಪ್ಯಾಂಪೋರ್ ನ ಹೊರವಲಯದ ಏಳು ಅಂತಸ್ತಿನ ಸರ್ಕಾರಿ ಕಚೇರಿಯಲ್ಲಿ ಉಗ್ರರು ಅಡಗಿದ್ದ ಹಿನ್ನೆಲೆಯಲ್ಲಿ ಸೋಮವಾರ ಅ.10 ರಿಂದ ಸೇನಾ ಕಾರ್ಯಚರಣೆ ಪ್ರಾರಂಭವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ಆ ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಖಡಕ್ ವಾರ್ನಿಂಗ್ ನೀಡಿದ ಇರಾನ್ ಸಂಸತ್ ಸ್ಪೀಕರ್!

ಲೂಟಿಕೋರನ ಭಯವೇ? ಖರ್ಗೆಯವರೇ, ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್

ಕುರ್ಚಿ ಕದನ: ಡಿಕೆಶಿ ಸಿಎಂ ಆಗುವುದು ಯಾವಾಗ?; ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

SCROLL FOR NEXT