ಸಂಗ್ರಹ ಚಿತ್ರ 
ದೇಶ

'ಮೊಹರಂ ಆಚರಣೆ': ಶ್ರೀನಗರದ ಹಲವೆಡೆ ನಿಷೇಧಾಜ್ಞೆ ಜಾರಿ

ಉಗ್ರ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು ಮೊಹರಂ ಮೆರವಣಿಗೆಗೆ ತಡೆಯೊಡ್ಡಿ ಶ್ರೀನಗರದ ಹಲವೆಡೆ...

ಶ್ರೀನಗರ: ಉಗ್ರ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು ಮೊಹರಂ ಮೆರವಣಿಗೆಗೆ ತಡೆಯೊಡ್ಡಿ ಶ್ರೀನಗರದ ಹಲವೆಡೆ ಬುಧವಾರ ನಿಷೇಧಾಜ್ಞೆಯನ್ನು ಜಾರಿ ಮಾಡಿದ್ದಾರೆ.

ಮತ್ತೆ ಹಿಂಸಾಚಾರ ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮೊಹರಂ ಮೆರವಣಿಗೆಗೂ ತಡೆಯೊಡ್ಡಲಾಗಿದೆ. ಶ್ರೀನಗರದ ಸೇರಿದಂತೆ ಹಲವೆಡೆ ಈಗಾಗಲೇ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

21 ವರ್ಷದ ಬುರ್ಹಾನ್ ಮುಜಾಫರ್ ವಾನಿ ಮತ್ತು ಆತನ ಇಬ್ಬರು ಸಹಚರರನ್ನು ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಯೋಧರು ಹತ್ಯೆ ಮಾಡಿದ್ದರು. ಇದರಂತೆ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಜುಲೈ.9 ರಿಂದಲೂ ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಹಿಂಸಾಚಾರದಲ್ಲಿ ಈ ವರೆಗೂ 91 ಮಂದಿ ಸಾವನ್ನಪ್ಪಿದ್ದು, 12,000ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘Dimagi Naxal’ ವಿವಾದ: ‘ಕಾಂಗ್ರೆಸ್‌ ಮಾವೋವಾದಿ ಪಕ್ಷವಾಗಿ ಬದಲಾಗುತ್ತಿದೆ’: ಕಿರಣ್‌ ರಿಜಿಜು ವಾಗ್ದಾಳಿ

‘ಅಲ್ಲಿ ಪ್ರತಿ ಮತದಾರನಿಗೂ photo ID’ಯಿದೆ: ಭಾರತದ ಚುನಾವಣಾ ವ್ಯವಸ್ಥೆ ಕೊಂಡಾಡಿದ ಟ್ರಂಪ್, ಅಮೆರಿಕಾ ಮತದಾನ ವ್ಯವಸ್ಥೆ ಬದಲಾವಣೆಗೆ ಪಟ್ಟು, SAVE America Act ಜಾರಿಗೆ ಆಗ್ರಹ..!

ಜಿಲ್ಲಾವಾರು ಕಾಂಗ್ರೆಸ್ ಶಾಸಕರೊಂದಿಗೆ ನಿಯಮಿತ ಸಭೆಗೆ ಸಿಎಂ ಡಿಕೆ. ಶಿವಕುಮಾರ್‌ ನಿರ್ಧಾರ..!

ಜಂತರ್ ಮಂತರ್‌ ಪ್ರತಿಭಟನೆ ಎಫೆಕ್ಟ್: ಮೋದಿ ಬೆಂಬಲಿಸಲು ಸರ್ಕಾರಿ ಹುದ್ದೆಗೆ ರಾಜೀನಾಮೆ ನೀಡಿದ ಪೊಲೀಸ್‌ ಕಾನ್‌ಸ್ಟೆಬಲ್‌!

ಬುರ್ಖಾ ಧರಿಸಿ ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ನೆಕ್ಲೆಸ್ ಕದ್ದ ಮಹಿಳೆಯರು; ಖತರ್ನಾಕ್ ಕಳ್ಳಿಯರ "ಕೈ"ಚಳಕ CCTVಯಲ್ಲಿ ಸೆರೆ!