ದೇಶ

ಸಮಾನ ನಾಗರಿಕ ಸಂಹಿತೆಯನ್ನು ಬಹಿಷ್ಕರಿಸುವುದಾಗಿ ಹೇಳಿದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ

ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ, ಸಮಾನ ನಾಗರಿಕ ಸಂಹಿತೆ ಕುರಿತಂತೆ ಕೇಂದ್ರ ಕಾನೂನು ಆಯೋಗದ ಪ್ರಶ್ನೆಗಳನ್ನು ತಿರಸ್ಕರಿಸಿದ್ದು, ಏಕರೂಪ ನಾಗರಿಕ ಸಂಹಿತೆಯನ್ನು ಬಹಿಷ್ಕರಿಸಲು ನಿರ್ಧರಿಸಿದೆ.

ನವದೆಹಲಿ: ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ, ಸಮಾನ ನಾಗರಿಕ ಸಂಹಿತೆ ಕುರಿತಂತೆ ಕೇಂದ್ರ ಕಾನೂನು ಆಯೋಗದ ಪ್ರಶ್ನೆಗಳನ್ನು ತಿರಸ್ಕರಿಸಿದ್ದು, ಏಕರೂಪ ನಾಗರಿಕ ಸಂಹಿತೆಯನ್ನು ಬಹಿಷ್ಕರಿಸಲು ನಿರ್ಧರಿಸಿದೆ.
ತ್ರಿವಳಿ ತಲಾಕ್,  ನಿಕಾಹ್ ಹಲಾಲ್,  ಬಹುಪತ್ನಿತ್ವ ಇಸ್ಲಾಮ್ ನ ಆಚರಣೆಯ ಅವಿಭಾಜ್ಯ ಅಂಗಗಳಲ್ಲ ಅಥವಾ ಅದನ್ನು ಪಾಲಿಸಲೇಬೇಕಾದ ಅನಿವಾರ್ಯ ಕಾನೂನುಗಳಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಹೇಳಿದ ಬೆನ್ನಲ್ಲೇ ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಏಕರೂಪ ನಾಗರಿಕ ಸಂಹಿತೆಯನ್ನು ಬಹಿಷ್ಕರಿಸುವುದಾಗಿ ತಿಳಿಸಿದೆ. ಏಕರೂಪ ನಾಗರಿಕ ಸಂಹಿತೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಐಎಂಪಿಎಲ್ ಬಿ ಪ್ರಧಾನ ಕಾರ್ಯದರ್ಶಿ ಮೌಲಾನಾ ವಾಲಿ ರೆಹ್ಮಾನಿ, ಏಕರೂಪ ನಾಗರಿಕ ಸಂಹಿತೆ ಸಂವಿಧಾನಕ್ಕೆ ವಿರುದ್ಧವಾಗಿದ್ದು, ಸಾಮಾಜಿಕ ಅಶಾಂತಿಗೆ ಕಾರಣವಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಸಂವಿಧಾನದಲ್ಲಿ ನಿರ್ದಿಷ್ಟ ಸಂಸ್ಕೃತಿ ಹಾಗು ಧರ್ಮದ ಆಚರಣೆಗೆ ಅವಕಾಶವಿದ್ದು , ಏಕರೂಪ ನಾಗರಿಕ ಸಂಹಿತೆ ಸಮಾಜವನ್ನು ಒಡೆಯಲಿದೆ ಎಂದು ಮೌಲಾನಾ ವಾಲಿ ರೆಹ್ಮಾನಿ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT