ಶಿವಾಜಿ 
ದೇಶ

ಛತ್ರಪತಿ ಶಿವಾಜಿ ಭಾವಚಿತ್ರವುಳ್ಳ ಟೀ-ಶರ್ಟ್ ಧರಿಸಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ಛತ್ರಪತಿ ಶಿವಾಜಿ ಮಹಾರಾಜ ಅವರ ಭಾವಚಿತ್ರವುಳ್ಳ ಟೀ-ಶರ್ಟ್ ಧರಿಸಿದ್ದ ಯುವಕನ ಮೇಲೆ ಉದ್ರಿಕ್ತ ಗುಂಪೊಂದು ಬುಧವಾರ ರಾತ್ರಿ 8 ಗಂಟೆ ಸುಮಾರಿನಲ್ಲಿ ಹಲ್ಲೆ ಮಾಡಿದೆ...

ಪುಣೆ: ಛತ್ರಪತಿ ಶಿವಾಜಿ ಮಹಾರಾಜ ಅವರ ಭಾವಚಿತ್ರವುಳ್ಳ ಟೀ-ಶರ್ಟ್ ಧರಿಸಿದ್ದ ಯುವಕನ ಮೇಲೆ ಉದ್ರಿಕ್ತ ಗುಂಪೊಂದು ಬುಧವಾರ ರಾತ್ರಿ 8 ಗಂಟೆ ಸುಮಾರಿನಲ್ಲಿ ಹಲ್ಲೆ ಮಾಡಿದೆ.

ಉತ್ತರೇಶ್ವರ್ ತರುಣ್ ಮಂಡಳದ ಕಾರ್ಯಕರ್ತ 19 ವರ್ಷದ ನವಾಜ್ ಮಸೀದಿ ಶೇಖ್ ನನ್ನು ಉದ್ರಿಕ್ತರ ಗುಂಪೊಂದು ಥಳಿಸಿದ್ದು ಈ ಸಂಬಂಧ ಶೇಖ್ ವಿಮನಾಂಟಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನನ್ವಯ ಪೊಲೀಸರು ನಾಗೇಶ್ ರಕ್ಕಪರ್ಸೆ, ಅತುಲ್, ಸಚಿನ್ ಕಾಲ್ಸೆ, ರಾಹುಲ್ ರಕ್ಕಪರ್ಸೆ, ಸಚಿನ್, ನಿತೀನ್ ರಕ್ಕಸರ್ಪೆ ಸೇರಿದಂತೆ 30 ಮಂದಿ ವಿರುದ್ಧ ಐಪಿಸಿ ಸೆಕ್ಷನ್ 143, 147, 148, 149, 285, 452, 323, 504, 506(2) ಮತ್ತು 427ರ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.

ಉತ್ತರೇಶ್ವರ್ ತರುಣ್ ಮಂಡಳ್ ಮರಾಠಿ ಸಮುದಾಯಕ್ಕೆ ಮೀಸಲಾತಿಗಾಗಿ ಮರಾಠಿ ಕಾಂತ್ರಿ ಮೋರ್ಚ ಪ್ರತಿಭಟನೆಯಲ್ಲಿ ತೊಡಗಿದ್ದರು. ಈ ಪ್ರತಿಭಟನೆಗಾಗಿ ರಾಷ್ಟ್ರೀಯ ನಾಯಕರ ಭಾವಚಿತ್ರವುಳ್ಳ ಟೀ-ಶರ್ಟ್ ಗಳನ್ನು ಧರಿಸಿದ್ದರು. ಪ್ರತಿಭಟನೆ ಬಳಿಕ ನವಾಜ್ ಮನೆಗೆ ಹಿಂತಿರುಗುವಾಗ ಆತನ ಮೇಲೆ ಹಲ್ಲೆ ನಡೆಸಿ ಟೀ-ಶರ್ಟ್ ಅನ್ನು ಹರಿದು ಹಾಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT