ಒತ್ತಡಕ್ಕೆ ಸಿಲುಕಿದ ಪಾಕ್: ಪತ್ರಕರ್ತ ಸಿರಿಲ್ ಅಲ್ಮೈದಾಗೆ ವಿಧಿಸಿದ್ದ "ದಿಗ್ಭಂಧನ" ಹಿಂಪಡೆಯುವ ಸೂಚನೆ 
ದೇಶ

ಒತ್ತಡಕ್ಕೆ ಸಿಲುಕಿದ ಪಾಕ್: ಪತ್ರಕರ್ತ ಸಿರಿಲ್ ಅಲ್ಮೈದಾಗೆ ವಿಧಿಸಿದ್ದ "ದಿಗ್ಭಂಧನ" ಹಿಂಪಡೆಯುವ ಸೂಚನೆ

ಸೇನೆ-ಪಾಕ್ ಸರ್ಕಾರದ ನಡುವಿನ ಬಿರುಕಿನ ಕುರಿತು ವರದಿ ಮಾಡಿದ್ದ ಪತ್ರಕರ್ತನಿಗೆ "ದಿಗ್ಭಂಧನ" ವಿಧಿಸಿದ್ದಕ್ಕೆ ತೀವ್ರ ಟೀಕೆ ಎದುರಿಸಿದ್ದ ಪಾಕಿಸ್ತಾನ ಈಗ ಎಚ್ಚೆತ್ತುಕೊಂಡಂತಿದೆ.

ನವದೆಹಲಿ: ಸೇನೆ-ಪಾಕ್ ಸರ್ಕಾರದ ನಡುವಿನ ಬಿರುಕಿನ ಕುರಿತು ವರದಿ ಮಾಡಿದ್ದ ಪತ್ರಕರ್ತನಿಗೆ "ದಿಗ್ಭಂಧನ" ವಿಧಿಸಿದ್ದಕ್ಕೆ ತೀವ್ರ ಟೀಕೆ ಎದುರಿಸಿದ್ದ ಪಾಕಿಸ್ತಾನ ಈಗ ಎಚ್ಚೆತ್ತುಕೊಂಡಂತಿದ್ದು, ಪತ್ರಕರ್ತನ ವಿರುದ್ಧ ಜರುಗಿಸಲಾಗಿದ್ದ ಕ್ರಮವನ್ನು ಹಿಂಪಡೆಯುವ ಸೂಚನೆ ನೀಡಿದೆ.

ಪಾಕಿಸ್ತಾನದ ಆಂತರಿಕ ಸಚಿವ ಚೌದರಿ ನಿಸಾರ್ ಈ ಬಗ್ಗೆ ಹೇಳಿಕೆ ನೀಡಿದ್ದು, ದಿಗ್ಬಂಧನ ವಿಧಿಸುವ ಪಟ್ಟಿಯಲ್ಲಿ ಡಾನ್ ಪತ್ರಿಕೆಯ ಪತ್ರಕರ್ತ, ಅಂಕಣಕಾರ ಸಿರಿಲ್ ಅಲ್ಮೈದಾ ಹೆಸರು ಹೇಗೆ ಬಂತೆಂಬುದರ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

3-4 ದಿನಗಳಲ್ಲಿ ತನಿಖೆ ಪೂರ್ಣಗೊಳ್ಳಲಿದ್ದು ತನಿಖೆ ಪೂರ್ಣಗೊಂಡ ನಂತರ ದಿಗ್ಬಂಧನದ ಆದೇಶವನ್ನು ವಾಪಸ್ ಪಡೆಯಲಾಗುವುದೆಂದು ಸಚಿವರು ಹೇಳಿದ್ದಾರೆ. ಪತ್ರಕರ್ತನಿಗೆ ದಿಗ್ಬಂಧನ ವಿಧಿಸಲಾಗಿರುವ ವರದಿಯನ್ನು ಭಾರತದ ಮಾಧ್ಯಮಗಳು ಪಾಕಿಸ್ತಾನ ತನ್ನ ನೆಲದವರಲ್ಲದ ಭಯೋತ್ಪಾದಕರ ವಿಷಯದಲ್ಲಿ ಹೇಗೆ ನಡೆದುಕೊಳ್ಳುತ್ತಿದೆ ಎಂಬುದನ್ನು ತಿಳಿದುಕೊಳ್ಳಲು ಬಳಸಿಕೊಂಡಿತ್ತು ಎಂದು ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT