ದೇಶ

ವಾರಣಾಸಿಯ ರಾಜಘಾಟ್ ಸೇತುವೆ ಮೇಲೆ ಕಾಲ್ತುಳಿತ, 19 ಸಾವು, 22 ಮಂದಿಗೆ ಗಾಯ

Lingaraj Badiger
ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿನಿಧಿಸುವ ಉತ್ತರ ಪ್ರದೇಶದ ವಾರಣಾಸಿಯ ಮುಗಲ್ ಸರಾಯಿಯಲ್ಲಿರುವ ಪ್ರಸಿದ್ಧ ರಾಜಘಾಟ್ ಸೇತುವೆ ಮೇಲೆ ಭೀಕರ ಕಾಲ್ತುಳಿತ ಸಂಭವಿಸಿ 19 ಮಂದಿ ಮೃತಪಟ್ಟಿದ್ದಾರೆ ಮತ್ತು 22ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಜೈ ಗುರುದೇವ್ ಬೆಂಬಲಿಗರು ರಾಜಘಾಟ್ ಸೇತುವೆ ಮೂಲಕ ಸಂಗಮಕ್ಕೆ ಹೋಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ, ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಧಾವಿಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ. 
ಗಾಯಗೊಂಡವರ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗಿದೆ.
SCROLL FOR NEXT