ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ 
ದೇಶ

ಭಯೋತ್ಪಾದನೆ ವಿರುದ್ಧ ಪಾಕ್ ಹೋರಾಟದ ಕುರಿತು ಶಂಕೆ: ರಾಜ್ ನಾಥ ಸಿಂಗ್

ಭಯೋತ್ಪಾದನೆ ವಿರುದ್ಧ ಹೋರಾಡುತ್ತೇವೆಂದು ಹೇಳುತ್ತಿರುವ ಪಾಕಿಸ್ತಾನದ ಮೇಲೆ ನಮಗೆ ಶಂಕೆಯಿಂದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಸೋಮವಾರ...

ಚಂಡೀಘಢ: ಭಯೋತ್ಪಾದನೆ ವಿರುದ್ಧ ಹೋರಾಡುತ್ತೇವೆಂದು ಹೇಳುತ್ತಿರುವ ಪಾಕಿಸ್ತಾನದ ಮೇಲೆ ನಮಗೆ ಶಂಕೆಯಿಂದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಸೋಮವಾರ ಹೇಳಿದ್ದಾರೆ.

ಪ್ರಾದೇಶಿಕ ಸಂಪಾದಕರೊಂದಿಗಿನ ಸಂವಾದದಲ್ಲಿ ಮಾತನಾಡಿರುವ ಅವರು, ಭಯೋತ್ಪಾದನೆ ವಿರುದ್ಧ ನಿಜವಾಗಲೂ ಪಾಕಿಸ್ತಾನ ಹೋರಾಡಲು ಮುಂದಾಗಿದ್ದೇ ಆದರೆ, ಪಾಕಿಸ್ತಾನಕ್ಕೆ ಸಹಾಯ ಮಾಡಲು ಭಾರತ ಸಿದ್ಧವಿದೆ. ಆದರೆ, ಪಾಕಿಸ್ತಾನ ನಿಜಕ್ಕೂ ಭಯೋತ್ಪಾದನೆ ವಿರುದ್ಧ ಹೋರಾಡಲಿದೆಯೇ ಎಂಬುದರ ಬಗ್ಗೆ ಭಾರತಕ್ಕೆ ಅನುಮಾನಗಳಿವೆ ಎಂದು ಹೇಳಿದ್ದಾರೆ.

ಭಯೋತ್ಪಾದನೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ನಡುವೆ ಇರುವ ವ್ಯತ್ಯಾಸಗಳನ್ನು ಪಾಕಿಸ್ತಾನ ಮರೆತುಹೋಗಿದೆ. ಭಾರತದಲ್ಲಿ ನಡೆಯುತ್ತಿರುವ ಬಹುತೇಕ ವಿಧ್ವಂಸಕ ಕೃತ್ಯಗಳು ಪಾಕಿಸ್ತಾನ ಮೂಲದ ಉಗ್ರರಿಂದಲೇ ಆಗುತ್ತಿದೆ. ಪಾಕಿಸ್ತಾನ ನಿಜಕ್ಕೂ ಭಯೋತ್ಪಾದನೆಯನ್ನು ಮಟ್ಟ ಹಾಕಲು ಮುಂದಾಗಿದ್ದೇ ಆದರೆ, ಸಹಾಯ ಮಾಡಲು ನಾವು ಸಿದ್ಧರಿದ್ದೇವೆ. ಆದರೆ, ಭಯೋತ್ಪಾದನೆ ವಿರುದ್ಧ ಹೋರಾಡುವ ಉದ್ದೇಶವನ್ನು ಪಾಕಿಸ್ತಾನ ಹೊಂದಿದೆಯೇ ಎಂಬುದರ ಬಗ್ಗೆ ನಮಗೆ ಸಂಶಯವಿದೆ.

ಸೈಬರ್ ಅಪರಾಧಗಳು ಕೂಡ ಇತ್ತೀಚಿನ ದಿನಗಳಲ್ಲಿ ದೊಡ್ಡ ತಲೆನೋವಾಗಿ ಪರಿಣಮಿಸಿವೆ. ಸೈಬರ್ ಅಪರಾಧಗಳನ್ನು ಮಟ್ಟಹಾಕಲು ಎಲ್ಲಾ ರೀತಿಯ ಕೆಲಸಗಳನ್ನು ಮಾಡಲಾಗುತ್ತಿದೆ. ರಾಷ್ಟ್ರೀಯ ಭದ್ರತಾ ಮಂಡಳಿ ಈ ಬಗ್ಗೆ ಕೆಲಸ ಮಾಡುತ್ತಿದೆ.

2008ರ ಮುಂಬೈ ದಾಳಿ ಬಳಿಕ ಭಾರತದ ಕರಾವಳಿ ತೀರ ಪ್ರದೇಶಗಳ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ಈ ಹಿಂದಿಗಿಂತಲೂ ನಮ್ಮ ಭದ್ರತಾ ಸಂಸ್ಥೆಗಳು ಸಾಕಷ್ಟು ಸಿದ್ಧತೆಗಳನ್ನು ನಡೆಸಿವೆ. ಬಾಂಗ್ಲಾದೇಶ, ಭೂತಾನ್ ಮತ್ತು ಮ್ಯಾನ್ಮಾರ್ ಸೇರಿದಂತೆ ಈಶಾನ್ಯ ಪ್ರದೇಶ ಹಾಗೂ ಅಂತರಾಷ್ಟ್ರೀಯ ಗಡಿಗಳಲ್ಲಿ ಹೆಚ್ಚಿನ ಕಣ್ಗಾವಲಿರಿಸಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!