ಸಂಗ್ರಹ ಚಿತ್ರ 
ದೇಶ

ಪೊಲೀಸರ ಬಳಿಯಿದ್ದ ಬಂದೂಕುಗಳನ್ನು ಕಿತ್ತುಕೊಂಡು ಪರಾರಿಯಾದ ಉಗ್ರರು

ಜಮ್ಮು ಮತ್ತು ಕಾಶ್ಮೀರದ ಪೊಲೀಸರ ಮೇಲೆ ದಾಳಿ ಮಾಡಿದ ಉಗ್ರರು ನಂತರ ಅವರ ಬಳಿಯಿದ್ದ 5 ಬಂದೂಕುಗಳನ್ನು ಕಿತ್ತುಕೊಂಡು ಸ್ಥಳದಿಂದ ಪರಾರಿಯಾಗಿರುವ ಘಟನೆ ಅನಂತನಾಗ್ ಜಿಲ್ಲೆಯ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೊಲೀಸರ ಮೇಲೆ ದಾಳಿ ಮಾಡಿದ ಉಗ್ರರು ನಂತರ ಅವರ ಬಳಿಯಿದ್ದ 5 ಬಂದೂಕುಗಳನ್ನು ಕಿತ್ತುಕೊಂಡು ಸ್ಥಳದಿಂದ ಪರಾರಿಯಾಗಿರುವ ಘಟನೆ ಅನಂತನಾಗ್ ಜಿಲ್ಲೆಯ ಟಿವಿ ಟವರ್ ಬಳಿ ಭಾನುವಾರ ರಾತ್ರಿ ನಡೆಸಿದಿದೆ.

ಕಳೆದ ರಾತ್ರಿ ಅನಂತನಾಗ್ ಜಿಲ್ಲೆಯಲ್ಲಿರುವ ಟಿವಿ ಟವರ್ ಬಳಿ ಬಂದಿರುವ ಉಗ್ರರು ಏಕಾಏಕಿ ಸ್ಥಳದಲ್ಲಿದ್ದ ಪೊಲೀಸರ ಮೇಲೆ ದಾಳಿ ಮಾಡಿದ್ದಾರೆ. ನಂತರ ಪೊಲೀಸರ ಬಳಿಯಿದ್ದ ಐದು ಬಂದೂಕುಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. ಪರಾರಿಯಾದ ಉಗ್ರರಿಗಾಗಿ ಈಗಾಗಲೇ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ.

ಈಗಾಗಲೇ ಭಾರತದೊಳಗೆ ನುಸುಳಿರುವ ಉಗ್ರರು ದೊಡ್ಡ ಮಟ್ಟದಲ್ಲಿಯೇ ವಿಧ್ವಂಸಕ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದು, ಉಗ್ರರ ಸಂಚನ್ನು ಭಾರತೀಯ ಸೇನೆ ವಿಫಲಗೊಳ್ಳುವಂತೆ ಮಾಡುತ್ತಿದೆ.

ಸೀಮಿತ ದಾಳಿಯಲ್ಲಿ ಪಾಕಿಸ್ತಾನದ ಸಾಕಷ್ಟು ಉಗ್ರರ ನೆಲೆಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿತ್ತು. ಭಾರತದ ಮೇಲೆ ಪ್ರತೀಕಾರ ತೀರಿಸಿಕೊಳ್ಳಲು ಉಗ್ರ ಸಂಘಟನೆಗಳು ಹವಣಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಹಲವೆಡೆ ಬಿಗಿ ಭದ್ರತೆಯನ್ನು ಒದಗಿಸಿರುವುದರಿಂದ ಈಗಾಗಲೇ ಭಾರತದೊಳಗೆ ನುಸುಳಿರುವ ಉಗ್ರರಿಗೆ ಅತ್ತಿತ್ತ ಅಲುಗಾಡಲು ಸಾಧ್ಯವಾಗದೆ ಒದ್ದಾಡುವಂತಹ ಪರಿಸ್ಥಿತಿ ಎದುರಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT