ಇರೋಮ್ ಶರ್ಮಿಳಾ 
ದೇಶ

ಇಂಫಾಲ್ ನಲ್ಲಿ ತಮ್ಮ ರಾಜಕೀಯ ಪಕ್ಷಕ್ಕೆ ಚಾಲನೆ ನೀಡಿದ ಇರೋಮ್ ಶರ್ಮಿಳಾ

ಮಣಿಪುರದಲ್ಲಿ ಜಾರಿಯಲ್ಲಿರುವ ಸೇನಾ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯನ್ನು(ಎಎಫ್‌ಎಸ್‌ಪಿಎ) ರದ್ದುಮಾಡಬೇಕೆಂದು...

ಗುವಾಹತಿ: ಮಣಿಪುರದಲ್ಲಿ ಜಾರಿಯಲ್ಲಿರುವ ಸೇನಾ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯನ್ನು(ಎಎಫ್‌ಎಸ್‌ಪಿಎ) ರದ್ದುಮಾಡಬೇಕೆಂದು ಆಗ್ರಹಿಸಿ ಸುಧೀರ್ಘ 16 ವರ್ಷಗಳ ಕಾಲ ಉಪವಾಸ ನಡೆಸಿದ್ದ ಇರೋಮ್ ಶರ್ಮಿಳಾ ಅವರು ಮಂಗಳವಾರ ಇಂಫಾಲ್ ನಲ್ಲಿ ತಮ್ಮ ರಾಜಕೀಯ ಪಕ್ಷಕ್ಕೆ ಚಾಲನೆ ನೀಡರುವ ಮೂಲಕ ಅಧಿಕೃತವಾಗಿ ಸಕ್ರಿಯ ರಾಜಕೀಯ ಪ್ರವೇಶ ಮಾಡಿದ್ದಾರೆ.
ಮಣಿಪುರ ರಾಜಧಾನಿ ಇಂಫಾಲ್ ನಲ್ಲಿ ಇಂದು ಇರೋಮ್ ಶರ್ಮಿಳಾ ಅವರು ತಮ್ಮ ನೂತನ ಪಕ್ಷ ಜನತಾ ಪುನರುಜ್ಜೀವನ ಮತ್ತು ನ್ಯಾಯ ಮೈತ್ರಿಕೂಟ(ಪಿಆರ್ ಜೆಎ)ಗೆ ಚಾಲನೆ ನೀಡಿದರು. ಎರೆಂಡ್ರೊ ಲಿಚೊನ್ ಬಾಮ್ ಅವರು ಈ ಪಕ್ಷದ ಸಂಚಾಲಕರಾಗಿದ್ದು, ಇರೋಮ್ ಶರ್ಮಿಳಾ ಅವರು ಸಹ ಸಂಚಾಲಕಿಯಾಗಿದ್ದಾರೆ.
ಮುಂದಿನ ವರ್ಷ ಮಣಿಪುರದಲ್ಲಿ ಚುನಾವಣೆ ನಡೆಯಲಿದ್ದು, ಶರ್ಮಿಳಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಕಲ ಸಿದ್ಧತೆ ನಡೆಸುತ್ತಿದ್ದಾರೆ.
16 ವರ್ಷಗಳ ನಂತರ ಕಳೆದ ಆಗಸ್ಟ್ ೯ರಂದು ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಶರ್ಮಿಳಾ, ತಾವು ರಾಜಕೀಯಕ್ಕೆ ಪ್ರವೇಸಿಸಲು ಅಪೇಕ್ಷಿಸಿರುವುದಾಗಿ ತಿಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT