ಜೆಎನ್ ಯು ಪ್ರತಿಭಟನೆ (ಸಂಗ್ರಹ ಚಿತ್ರ) 
ದೇಶ

ಕ್ಯಾಂಪಸ್ ನಲ್ಲಿ ಜಗಳ; ಜೆಎನ್ ಯು ವಿದ್ಯಾರ್ಥಿ ಅನುಮಾನಾಸ್ಪದ ನಾಪತ್ತೆ, ಪೋಷಕರಿಂದ ಪ್ರತಿಭಟನೆ

ದೇಶ ವಿರೋಧಿ ಘೋಷಣೆಗಳಿಂದ ವಿವಾದಕ್ಕೀಡಾಗಿರುವ ದೆಹಲಿಯ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ ಮತ್ತೆ ಸುದ್ದಿಯಲ್ಲಿದ್ದು, ವಿವಿಯ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.

ನವದೆಹಲಿ: ದೇಶ ವಿರೋಧಿ ಘೋಷಣೆಗಳಿಂದ ವಿವಾದಕ್ಕೀಡಾಗಿರುವ ದೆಹಲಿಯ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ ಮತ್ತೆ ಸುದ್ದಿಯಲ್ಲಿದ್ದು, ವಿವಿಯ ವಿದ್ಯಾರ್ಥಿಯೊಬ್ಬ  ಅನುಮಾನಾಸ್ಪದವಾಗಿ ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.

ನಜೀಬ್ ಅಹ್ಮಮದ್ ಎಂಬ ವಿದ್ಯಾರ್ಥಿ ಜೆಎನ್ ಯು ಕ್ಯಾಂಪಸ್ ನಿಂದ ಅನುಮಾನಾಸ್ಪದವಾಗಿ ನಾಪತ್ತೆಯಾಗಿದ್ದು, ಕಳೆದ ಶನಿವಾರದಿಂದ ಆತನ ಕಾಣುತ್ತಿಲ್ಲ ಎಂದು ತಿಳಿದುಬಂದಿದೆ. ಇದೀಗ  ನಾಪತ್ತೆಯಾಗಿರುವ ತನ್ನ ಮಗನನ್ನು ಹುಡುಕಿಕೊಡುವಂತೆ ನಜೀಬ್ ಅಹ್ಮಮದ್ ಅವರ ಪೋಷಕರು ಕ್ಯಾಂಪಸ್ ನಲ್ಲಿಯೇ ಪ್ರತಿಭಟನೆ ನಡೆಸುತ್ತಿದ್ದು, ಪೋಷಕರಿಗೆ ಕೆಲ ವಿದ್ಯಾರ್ಥಿಗಳು ಕೂಡ  ಸಾಥ್ ನೀಡಿದ್ದಾರೆ.

ಜೆಎನ್ ಯುನಲ್ಲಿ ಬಯೋಟೆಕ್ನಾಲಜಿ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ನಜೀಬ್ ಅಹ್ಮಮದ್ ಕಳೆದ 15 ದಿನಗಳ ಹಿಂದಷ್ಟೇ ವಿವಿಯ ಹಾಸ್ಟೆಲ್ ಗೆ ಬಂದಿದ್ದ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ವಿದ್ಯಾರ್ಥಿ ನಜೀಬ್ ಅಹ್ಮಮದ್ ನಾಪತ್ತೆಯ ಹಿಂದೆ ಎಬಿವಿಪಿ ಸಂಘಟನೆಯ ಕೈವಾಡವಿದೆ ಎಂದು ಶಂಕಿಸಲಾಗುತ್ತಿದೆ. ವಿದ್ಯಾರ್ಥಿ ಸಮುದಾಯದ ಚುನಾವಣೆ ನಿಮಿತ್ತ ಕಳೆದ  ಶುಕ್ರವಾರ ವಿವಿ ಆವರಣ ಮತ್ತು ಹಾಸ್ಟೆಲ್ ನಲ್ಲಿ ಪ್ರಚಾರ ನಡೆಸಲಾಗಿತ್ತು. ಈ ವೇಳೆ ವಿದ್ಯಾರ್ಥಿ ನಜೀಬ್ ಅಹ್ಮಮದ್ ಎಬಿವಿಪಿ ಸಂಘಟನೆಗೆ ಸೇರಿದ್ದ ಸದಸ್ಯನಿಗೆ ಕಪಾಳ ಮೋಕ್ಷ ಮಾಡಿದ್ದ.  ಇದರಿಂದ ಕುಪಿತಗೊಂಡಿದ್ದ ಆತ ರಾತ್ರೋರಾತ್ರಿ ತನ್ನ ಇತರೆ ಸಂಗಡಿಗರನ್ನು ಕರೆತಂದು ನಜೀಬ್ ಅಹ್ಮಮದ್ ಮೇಲೆ ಹಲ್ಲೆ ನಡೆಸಿದ್ದ. ಈ ಘಟನೆ ಬಳಿಕ ನಜೀಬ್ ಅಹ್ಮಮದ್  ನಾಪತ್ತೆಯಾಗಿದ್ದಾನೆ ಎಂದು ಆತನ ಸ್ನೇಹಿತರು ಅನುಮಾನ ವ್ಯಕ್ತಪಡಿಸಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಘಟನೆಗೂ ಎಬಿವಿಪಿಗೂ ಯಾವುದೇ ಸಂಬಂಧವಿಲ್ಲ. ವಿದ್ಯಾರ್ಥಿಗಳ ನಡುವಿನ ಗಲಾಟೆಯನ್ನು ದುರುದ್ದೇಶಪೂರ್ವಕವಾಗಿ  ರಾಜಕೀಯಗೊಳಿಸಲಾಗುತ್ತಿದೆ ಎಂದು ಅಭಿಪ್ರಾಯಪಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!