ದೇಶ

ನಾಪತ್ತೆಯಾಗಿರುವ ಕಡತಗಳ ಉತ್ಖನನಕ್ಕಾಗಿ ಪಿಎಂಒ ನಲ್ಲಿ ಪುರಾತತ್ವ ವಿಭಾಗ: ಪ್ರಧಾನಿ ಮೋದಿ

ನಾಪತ್ತೆಯಾಗಿರುವ ಸರ್ಕಾರಿ ಕಡತಗಳಿಗಾಗಿ ಪ್ರಧಾನಿ ಕಾರ್ಯಾಲಯ ಪುರಾತತ್ವ ವಿಭಾಗವನ್ನೇ ಪ್ರಾರಂಭಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳ್ದಿದಾರೆ.

ಹಿಮಾಚಲಪ್ರದೇಶ: ನಾಪತ್ತೆಯಾಗಿರುವ ಸರ್ಕಾರಿ ಕಡತಗಳಿಗಾಗಿ ಪ್ರಧಾನಿ ಕಾರ್ಯಾಲಯ ಪುರಾತತ್ವ ವಿಭಾಗವನ್ನೇ ಪ್ರಾರಂಭಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳ್ದಿದಾರೆ.

ಹಿಮಾಚಲಪ್ರದೇಶದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಯೋಜನೆಗಳ ಕಡತಗಳು ನಾಪತ್ತೆಯಾಗಿರುವುದಕ್ಕೆ ಸಂಬಂಧಿಸಿದಂತೆ ಪ್ರಧಾನಿ ಕಾರ್ಯಾಲಯ ಪುರಾತತ್ವ ವಿಭಾಗವನ್ನೇ ಪ್ರಾರಂಭಿಸಬೇಕಾದ ಸ್ಥಿತಿ ಬಂದಿದೆ ಎಂದು ವ್ಯಂಗ್ಯ ಧಾಟಿಯಲ್ಲಿ ಹೇಳಿದ್ದಾರೆ.

ಕಳೆದ 30-40 ವರ್ಷಗಳ ಹಿಂದಿನ ಯೋಜನೆಗಳಿಗೆ ಸಂಬಂಧಿಸಿದ ಎಷ್ಟು ಕಡತಗಳು ನಾಪತ್ತೆಯಾಗಿದೆ ಎಂದರೆ ಅದನ್ನು ಹುಡುಕಲು ಪ್ರಧಾನಿ ಕಾರ್ಯಾಲಯ ಪ್ರತ್ಯೇಕವಾದ ಒಂದು ಪುರಾತತ್ವ ವಿಭಾಗವನ್ನು ಪ್ರಾರಂಭಿಸಬೇಕಿದೆ. ನಾನು ಅಧಿಕಾರ ವಹಿಸಿಕೊಂಡಾಗ ಈ ಬಗ್ಗೆ ನಿಜಕ್ಕೂ ಅಚ್ಚರಿ ಮೂಡಿತ್ತು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಕೆಲವು ದಶಕಗಳ ಹಿಂದೆ ಹಲವು ಯೋಜನೆಗಳನ್ನು ಪ್ರಾರಂಭಿಸಲಾಗಿತ್ತು. ಆದರೆ ಅದಕ್ಕೆ ಶಿಲಾನ್ಯಾಸ ನೆರವೇರಿದ ಬಳಿಕ ಯೋಜನೆಗಳು ಮುಂದುವರೆಯದೆ ಅದಕ್ಕೆ ಸಂಬಂಧಿಸಿದ ಕಡತಗಳೇ ನಾಪತ್ತೆಯಾದವು. ನಂಗಲ್ ಆಣೆಕಟ್ಟು- ತಲ್ವಾರ ರೈಲ್ವೆ ಯೋಜನೆ ಇದಕ್ಕೆ ಉತ್ತಮ ಉದಾಹರಣೆಯಾಗಿದ್ದು 1981 ರಲ್ಲಿ ಪ್ರಾರಂಭವಾದ ಯೋಜನೆ ಇನ್ನೂ ಪೂರ್ಣಗೊಂಡಿಲ್ಲದೆ ನೆನೆಗುದಿಗೆ ಬಿದ್ದಿತ್ತು ಎಂದು ಪ್ರಧಾನಿ ಮಾಹಿತಿ ನೀಡಿದ್ದಾರೆ.    
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 35 ವರ್ಷಗಳ ಹಿಂದಿನ ಯೋಜನೆಗೆ ಮರು ಜೀವ ನೀಡಲಾಗಿದ್ದು 2,100 ಕೋಟಿ ವೆಚ್ಚದಲ್ಲಿ ಯೋಜನೆಯನ್ನು ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಆದರೆ ಇದೆ ಯೋಜನೆ 35 ವರ್ಷಗಳ ಹಿಂದೆಯೇ ಮುಕ್ತಾಯಗೊಳಿಸಿದ್ದರೆ ಕೇವಲ 34 ಕೋಟಿ ರೂಪಾಯಿ ವೆಚ್ಚದಲ್ಲಿ ಪೂರ್ಣಗೊಳ್ಳುತ್ತಿತ್ತು ಎಂದು ಮೋದಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT