ಸಾಂದರ್ಭಿಕ ಚಿತ್ರ 
ದೇಶ

ಅಪಘಾತ: ರಸ್ತೆಗೆ ಅಡ್ಡ ಬಂದ ನಾಯಿ ಉಳಿಸಲು ಹೋಗಿ ಒಂದೇ ಕುಟುಂಬದ ಐವರು ಸಾವು

ರಸ್ತೆಗೆ ಅಡ್ಡ ಬಂದ ಬೀದಿ ನಾಯಿ ಉಳಿಸಲು ಹೋಗಿ ಒಂದೇ ಕುಟುಂಬ ಐವರು ದುರ್ಮರಣವನ್ನಪ್ಪಿರುವ ಘಟನೆಯೊಂದು ಪಂಜಾಬ್ ರಾಜ್ಯದ ಲುಧಿಯಾನಾದಲ್ಲಿ ಬುಧವಾರ ನಡೆದಿದೆ....

ಲುಧಿಯಾನ: ರಸ್ತೆಗೆ ಅಡ್ಡ ಬಂದ ಬೀದಿ ನಾಯಿ ಉಳಿಸಲು ಹೋಗಿ ಒಂದೇ ಕುಟುಂಬ ಐವರು ದುರ್ಮರಣವನ್ನಪ್ಪಿರುವ ಘಟನೆಯೊಂದು ಪಂಜಾಬ್ ರಾಜ್ಯದ ಲುಧಿಯಾನಾದಲ್ಲಿ ಬುಧವಾರ ನಡೆದಿದೆ.

ಲುಧಿಯಾನಾದ ಗಾಂಧಿನಗರ ನಿವಾಸಿಗಳಾದ ಜ್ಯೋತಿ ಹಾಗೂ ಪರ್ವೀನ್ ಕುಮಾರ್ ಹಾಗೂ ಅವರ ಮೂವರು ಮಕ್ಕಳು ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ.

ಪರ್ವೀನ್ ಕುಮಾರ್ ಅವರು ತಮ್ಮ ಕುಟುಂಬಸ್ಥರೊಂದಿಗೆ ಸಂಗ್ರೂರ್ ಜಿಲ್ಲೆಯಲ್ಲಿರುವ ಸಂಬಂಧಿಕರೊಬ್ಬರ ಮನೆಗೆ ಹೋಗಿ ಬರುತ್ತಿದ್ದರು. ಡೆಹ್ಲೋನ್ ಪ್ರದೇಶಕ್ಕೆ ಬರುತ್ತಿದ್ದಂತೆ ನಾಯಿಯೊಂದು ರಸ್ತೆಗೆ ಅಡ್ಡ ಬಂದಿದೆ. ಈ ವೇಳೆ ನಾಯಿ ಉಳಿಸಲು ಹೋದ ಪರ್ವೀನ್ ಅವರು ಕಾರಿನ ಮೇಲಿದ್ದ ನಿಯಂತ್ರಣವನ್ನು ಕಳೆದುಕೊಂಡಿದ್ದಾರೆ.

ನಂತರ ಡಿವೈಡರ್ ಗೆ ಗುದ್ದಿದ ಕಾರು ನಂತರ ಲುಧಿಯಾನದಿಂದ ಬರುತ್ತಿದ್ದ ಖಾಸಗಿ ಬಸ್ ವೊಂದಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬ ಐವರು ಸಾವನ್ನಪ್ಪಿದ್ದಾರೆಂದು ಪೊಲೀಸ್ ಇನ್ಸ್ ಪೆಕ್ಟರ್ ಅಮನ್ದೀಪ್ ಸಿಂಗ್ ಬ್ರಾರ್ ಅವರು ಹೇಳಿದ್ದಾರೆ. ಮೃತರನ್ನು ಸ್ಥಳೀಯ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT