Rahul gandh 
ದೇಶ

ರಾಹುಲ್ ಗಾಂಧಿಯನ್ನು ಕತ್ತೆಯೆಂದು ಕರೆದ ಕಾಂಗ್ರೆಸ್ ಶಾಸಕ ಅಮಾನತು

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಬಹಿರಂಗವಾಗಿಯೇ 'ಕತ್ತೆ" ಎಂದು ಕರೆದಿದ್ದ ಕಾಂಗ್ರೆಸ್ ಬಂಡಾಯ ಶಾಸಕ ಆರ್.ಕೆ. ರಾಯ್ ಅವರನ್ನು ಪಕ್ಷದಿಂದ ಅಮಾನತು...

ರಾಯ್ಪುರ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಬಹಿರಂಗವಾಗಿಯೇ 'ಕತ್ತೆ" ಎಂದು ಕರೆದಿದ್ದ ಕಾಂಗ್ರೆಸ್ ಬಂಡಾಯ ಶಾಸಕ ಆರ್.ಕೆ. ರಾಯ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.

ನಿನ್ನೆ ನಡೆದ ಛತ್ತೀಸ್'ಗಢ ಕಾಂಗ್ರೆಸ್ ಉನ್ನತಾಧಿಕಾರಿಗಳ ಸಮಿತಿ ಸಭೆ ಈ ನಿರ್ಧಾರವನ್ನು ಕೈಗೊಂಡಿದ್ದು, ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿದ್ದಾರೆಂದು ಹೇಳಿ ರಾಯ್ ಅವರನ್ನು ಅಮಾನತುಗೊಳಿಸಿದೆ.

ಕಾಂಗ್ರೆಸ್ ನಾಯಕರ ಈ ನಿರ್ಧಾರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ರಾಯ್ ಅವರು, ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ನಾಯಕರ ನಿರ್ಧಾರದಿಂದ ನನಗೆ ಬೇಸರವಾಗುತ್ತಿಲ್ಲ. ನಾನು ಸತ್ಯವನ್ನೇ ಹೇಳಿದ್ದೇನೆ. ಪಕ್ಷದ ಅಮಾನತಿನಿಂದಾಗಿ ಇದೀಗ ನಾನು ಸ್ವತಂತ್ರಗೊಂಡಿದ್ದೇನೆಂದು ಹೇಳಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ಹೇಳಿಕೆ ನೀಡಿದರೆ ಪಕ್ಷದಿಂದ ಹೊರಹಾಕುತ್ತಾರೆಂದು ಈ ಹಿಂದೆ ಕೂಡ ನಾನು ಹೇಳಿಕೆ ನೀಡಿದ್ದೆ. ರಾಹುಲ್ ಹಾಗೂ ಅವರ ದೃಷ್ಟಿಕೋನ ಮತ್ತವರ ನಾಯಕತ್ವದ ವಿರುದ್ಧ ನಾನು ಮಾತನಾಡಿದ್ದೇನೆ. ಇದೀಗ ನನ್ನನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಪಕ್ಷ ಕ್ರಮಕೈಗೊಳ್ಳುತ್ತದೆಂಬ ಕಾರಣಕ್ಕೆ ಕತ್ತೆಯನ್ನು ಕುದುರೆಯೆಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ನನ್ನ ಪ್ರಕಾರ ಕತ್ತೆ ಎಂದರೆ ಕತ್ತೆಯೇ, ಕುದುರೆ ಎಂದರೆ ಕುದುರೆಯೇ.

ನನ್ನ ಆಲೋಚನೆ ತಪ್ಪು ಎಂದಾದಾರೆ, ಪಕ್ಷ ಅಂಧತ್ವದಲ್ಲಿರಬೇಕು ಇಲ್ಲವೇ, ನಿರ್ಧಾರ ಕೈಗೊಂಡ ನಾಯಕರು ಅಂಧತ್ವದಲ್ಲಿರಬೇಕು. ನಾನೊಬ್ಬ ಮುಕ್ತವಾಗಿ ಮಾತನಾಡುವ ಮನುಷ್ಯನಾಗಿದ್ದು, ಬುಡಕಟ್ಟು ಜನರ ಪ್ರತಿನಿಧಿಯಾಗಿದ್ದೇನೆ. ಕಾಂಗ್ರೆಸ್ ನ ಈ ನಿರ್ಧಾರ ಬುಡಕಟ್ಟು ಜನರ ಮೇಲಿರುವ ಅವರ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT