ಅಜಿತ್ ಪವಾರ್ 
ದೇಶ

ಶಾಸಕರನ್ನು ಬಿಟ್ಟಾಕಿ, 50ಲಕ್ಷಕ್ಕೆ ಒಬ್ಬ ಕಾರ್ಪೋರೇಟರ್ ಬರಲ್ಲ: ಅಜಿತ್ ಪವಾರ್ ವಿವಾದಾತ್ಮಕ ಹೇಳಿಕೆ

ಶಾಸಕರನ್ನು ಬಿಟ್ಟಾಕಿ, ಈಗ 50 ಲಕ್ಷ ರುಪಾಯಿಗೆ ಒಬ್ಬ ಕಾರ್ಪೋರೇಟರ್ ಸಹ ಬರಲ್ಲ ಎಂದು ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿ...

ಮುಂಬೈ: ಶಾಸಕರನ್ನು ಬಿಟ್ಟಾಕಿ, ಈಗ 50 ಲಕ್ಷ ರುಪಾಯಿಗೆ ಒಬ್ಬ ಕಾರ್ಪೋರೇಟರ್ ಸಹ ಬರಲ್ಲ ಎಂದು ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಎನ್ ಸಿಪಿ ನಾಯಕ ಅಜಿತ್ ಪವಾರ್ ಅವರು ಬುಧವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಇಂದು ಪಕ್ಷದ ಸಭೆಯೊಂದರಲ್ಲಿ ಮಾತನಾಡಿದ ಎನ್ ಸಿಪಿ ನಾಯಕ, ಹಿಂದೆ 50 ಲಕ್ಷ ರುಪಾಯಿ ಕೊಟ್ಟರೆ ಶಾಸಕರು ನಿಷ್ಠೇ ಬದಲಾಯಿಸುತ್ತಿದ್ದರು. ಆದರೆ ಈಗ 50ಲಕ್ಷಕ್ಕೆ ಒಬ್ಬ ಕಾರ್ಪೋರೇಟರ್ ಸಹ ಒಪ್ಪಲ್ಲ ಎಂದು ಶಾಸಕರ ಕುದುರೆ ವ್ಯಾಪಾರವನ್ನು ಒಪ್ಪಿಕೊಂಡಿದ್ದಾರೆ.
ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ವಿಲಾಸ್ ರಾವ್ ದೇಶಮುಖ್ ಅವರ ಬಹುಮತ ಸಾಬೀತುಪಡಿಸುವ ಸಂದರ್ಭದಲ್ಲಿ ಕುದುರೆ ವ್ಯಾಪಾರ ಮತ್ತು ಶಾಸಕರ ಪಕ್ಷಾಂತರ ಭೀತಿಯಿಂದ ಎಲ್ಲಾ ಶಾಸಕರನ್ನು ಬೆಂಗಳೂರಿಗೆ ಕರೆದೊಯ್ಯಲಾಗಿತ್ತು. ಈ ವೇಳೆ ಶಾಸಕರು ಕೇವಲ 50 ಲಕ್ಷ ರುಪಾಯಿಗೆ ಪಕ್ಷಾಂತರಕ್ಕೆ ಒಪ್ಪಿಗೆ ಸೂಚಿಸಿದ್ದರು. ಆದರೆ ಈಗ ಆ ಮೊತ್ತಕ್ಕೆ ಒಬ್ಬ ಕಾರ್ಪೋರೇಟರ್ ಸಹ ಪಕ್ಷಾಂತರ ಮಾಡಲ್ಲ ಎಂದು ಪವಾರ್ ಹೇಳಿದ್ದಾರೆ.
ನಿಷ್ಠೆ ಬದಲಾಯಿಸಿ ಮತ್ತೊಂದು ಪಕ್ಷಕ್ಕೆ ಹೋಗುವ ನಾಯಕರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ನೀಡಬೇಡಿ ಎಂದು ಸಹ ಅಜಿತ್ ಪವಾರ್ ಈ ವೇಳೆ ಕರೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT