ಸೀಮಿತ ದಾಳಿಗೆ ಆರ್ ಎಸ್ಎಸ್ ಬೋಧನೆ ಹೇಳಿಕೆ ಸಮರ್ಥಿಸಿಕೊಂಡ ಗೋವಾ ಬಿಜೆಪಿ 
ದೇಶ

ಸೀಮಿತ ದಾಳಿಗೆ ಆರ್ ಎಸ್ಎಸ್ ಬೋಧನೆ ಹೇಳಿಕೆ ಸಮರ್ಥಿಸಿಕೊಂಡ ಗೋವಾ ಬಿಜೆಪಿ

ಪಿಒಕೆಯಲ್ಲಿ ಭಾರತೀಯ ಸೇನೆ ನಡೆಸಿದ ದಾಳಿಗೆ ಆರ್ ಎಸ್ಎಸ್ ಬೋಧನೆಗಳು ಪ್ರೇರಣೆಯಾಗಿರಬಹುದು ಎಂಬ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿಕೆಯನ್ನು ಗೋವಾ ಬಿಜೆಪಿ ಬೆಂಬಲಿಸಿದೆ.

ಪಣಜಿ: ಪಿಒಕೆಯಲ್ಲಿ ಭಾರತೀಯ ಸೇನೆ ನಡೆಸಿದ ದಾಳಿಗೆ ಆರ್ ಎಸ್ಎಸ್ ಬೋಧನೆಗಳು ಪ್ರೇರಣೆಯಾಗಿರಬಹುದು ಎಂಬ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿಕೆಯನ್ನು ಗೋವಾ ಬಿಜೆಪಿ ಬೆಂಬಲಿಸಿದೆ.

ಮನೋಹರ್ ಪರಿಕ್ಕರ್ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೋವಾ ಬಿಜೆಪಿ ವಕ್ತಾರ ಕಿರಣ್ ಕಂಡೋಲ್ಕರ್, ಸೀಮಿತ ದಾಳಿ ನಡೆಸಿರುವ ಸೇನಾ ಕಾರ್ಯಾಚರಣೆ ಅಭಿನಂದನಾರ್ಹ. ಆದರೆ ಸೀಮಿತ ದಾಳಿ ನಡೆಸಬೇಕಾದರೆ ಅದಕ್ಕೆ ಒಬ್ಬ ಮಾರ್ಗದರ್ಶಕ, ನಿರ್ದೇಶಕ ಅಗತ್ಯ ಹಾಗೂ ದಾಳಿ ನಡೆಸಿದ ಸೇನೆಯ ಬೆಂಬಲಕ್ಕೆ ಇರುವುದು ಮುಖ್ಯವಾಗುತ್ತದೆ. ದಾಳಿ ನಡೆಸಿದ ಸೇನೆಗೆ ಪ್ರೇರಕ ಶಕ್ತಿಯಾಗಿ ಕೆಲಸ ಮಾಡಿದ್ದು ಆರ್ ಎಸ್ ಎಸ್ ನಿಂದ ಕಲಿತ ಮನೋಹರ್ ಪರಿಕ್ಕರ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಎಂದು ಕಿರಣ್ ಕಂಡೋಲ್ಕರ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಇಬ್ಬರೂ ಆರ್ ಎಸ್ ಎಸ್ ನಿಂದ ತರಬೇತಿ ಪಡೆದವರು. ಆದ್ದರಿಂದ ಸೇನೆ ಸೀಮಿತ ದಾಳಿ ನಡೆಸುವುದರ ಹಿಂದೆ ಆರ್ ಎಸ್ಎಸ್ ನ ಬೋಧನೆಗಳೂ ಕೆಲಸ ಮಾಡಿರಬಹುದು ಎಂದು ಗೋವಾ ಬಿಜೆಪಿ ವಕ್ತಾರರು ಅಭಿಪ್ರಾಯಪಟ್ಟಿದ್ದಾರೆ. ಆರ್ ಎಸ್ಎಸ್ ನಿಂದ ಪಡೆದ ಬೋಧನೆಗಳು ಸೀಮಿತ ದಾಳಿ ನಡೆಸುವ ವೇಳೆ ಕಠಿಣ ನಿರ್ಧಾರ ಕೈಗೊಳ್ಳುವುದಕ್ಕೆ ಸಹಕಾರಿಯಾಗಿರುವ ಸಾಧ್ಯತೆ ಇದೆ. ಆದ್ದರಿಂದ ಮನೋಹರ್ ಪರಿಕ್ಕರ್ ಅವರ ಹೇಳಿಕೆಯನ್ನು ತಪ್ಪು ಎನ್ನಲು ಸಾಧ್ಯವಿಲ್ಲ ಎಂದು ಗೋವಾ ಬಿಜೆಪಿ ಘಟಕ ರಕ್ಷಣಾ ಸಚಿವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT