ಕರಣ್ ಜೋಹರ್ 
ದೇಶ

'ಎ ದಿಲ್ ಹೇ ಮುಷ್ಕಿಲ್' ಚಿತ್ರ ವಿವಾದ: ಕರಣ್ ವಿರುದ್ಧ ಮುಂದುವರೆದ ಎಂಎನ್ಎಸ್ ಪ್ರತಿಭಟನೆ

ವಿವಾದಿತ ಎ ದಿಲ್ ಹೆ ಮುಷ್ಕಿಲ್ ಚಿತ್ರದ ವಿರುದ್ಧದ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಪ್ರತಿಭಟನೆಯನ್ನು ಮುಂದುವರೆಸಿದ್ದು, ಚಿತ್ರ ಬಿಡುಗಡೆಯಾಗುವುದಕ್ಕೆ ಬಿಡುವುದಿಲ್ಲ ಎಂದು...

ಮುಂಬೈ: ವಿವಾದಿತ ಎ ದಿಲ್ ಹೆ ಮುಷ್ಕಿಲ್ ಚಿತ್ರದ ವಿರುದ್ಧದ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಪ್ರತಿಭಟನೆಯನ್ನು ಮುಂದುವರೆಸಿದ್ದು, ಚಿತ್ರ ಬಿಡುಗಡೆಯಾಗುವುದಕ್ಕೆ ಬಿಡುವುದಿಲ್ಲ ಎಂದು ಗುರುವಾರ ಹೇಳಿದೆ.

ಚಿತ್ರದಲ್ಲಿ ಪಾಕಿಸ್ತಾನ ಕಲಾವಿದ ಫವಾದ್ ಖಾನ್ ಅವರು ನಟಿಸಿದ್ದು. ಯಾವುದೇ ಕಾರಣಕ್ಕೂ ಚಿತ್ರ ಬಿಡುಗಡೆಯಾಗುವುದಕ್ಕೆ ಬಿಡುವುದಿಲ್ಲ ಎಂದು ಹೇಳಿ ಎಂಎನ್ಎಸ್ ಕಾರ್ಯಕರ್ತರು ಮುಂಬೈನಲ್ಲಿರುವ ಮೆಲ್ಟಿಪ್ಲೆಕ್ಸ್ ವೊಂದರ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಚಿತ್ರಕ್ಕೆ ವಿರೋಧಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದಷ್ಟೇ ಕರಣ್ ಜೋಹರ್ ಅವರು ಹೇಳಿಕೆಯೊಂದನ್ನು ನೀಡಿದ್ದರು. ಚಿತ್ರಕ್ಕೆ ವಿರೋಧಗಳು ವ್ಯಕ್ತವಾಗುತ್ತಿದ್ದರೂ ನಾನು ಮೌನವಹಿಸಿದ್ದೆ, ಇದಕ್ಕೆ ಕಾರಣ ನನಗೆ ನೋವಾಗಿದೆ. ನನ್ನನ್ನು ದೇಶ ವಿರೋಧಿ ಎಂದು ಕೆಲವರು ಕರೆದಿದ್ದರು. ಮೊದಲು ಇದಕ್ಕೆ ಉತ್ತರ ನೀಡಲು ಬಯಸುತ್ತೇನೆ. ನನಗೆ ದೇಶ ಮೊದಲು. ದೇಶಕ್ಕಿಂತಲೂ ಮಿಗಿಲಾದದ್ದು ಬೇರೆ ಇಲ್ಲ. ನನ್ನ ಕೆಲಸ ಮೂಲಕ ನನ್ನ ದೇಶಾಭಿಮಾನವನ್ನು ನಾನು ತೋರಿಸಿದ್ದೇನೆಂದು ಹೇಳಿದ್ದರು.

ಸೆಪ್ಟೆಂಬರ್-ಡಿಸೆಂಬರ್ ವರೆಗಿನ ವಾತಾವರಣ ವಿಭಿನ್ನವಾಗಿತ್ತು. ಇದೀಗ ವಾತಾವರಣ ಬದಲಾಗಿದೆ. ಉಭಯ ದೇಶಗಳ ನಡುವಿನ ಸಂಬಂಧವನ್ನು ಸರಿಪಡಿಸುವ ಸರ್ಕಾರಗಳು ಸಲುವಾಗಿ ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದೆ. ಆ ಪ್ರಯತ್ನಗಳನ್ನು ನಾನು ಗೌರವಿಸುತ್ತೇನೆ. ಜನರ ಭಾವನೆಗಳು ಹಾಗೂ ಆಲೋಚನೆಗಳನ್ನು ನಾನು ಅರ್ಥಮಾಡಿಕೊಳ್ಳುತ್ತೇನೆ. ಮುಂದಿನ ಚಿತ್ರಗಳಲ್ಲಿ ಯಾವುದೇ ಕಾರಣಕ್ಕೂ ವಿದೇಶಿ ಹಾಗೂ ಪಾಕಿಸ್ತಾನ ಕಲಾವಿದರನ್ನು ಹಾಕಿಕೊಂಡು ಚಿತ್ರ ಮಾಡುವುದಿಲ್ಲ. ಚಿತ್ರದಲ್ಲಿ 3000ಕ್ಕೂ ಹೆಚ್ಚು ಭಾರತೀಯ ಜನರು ರಕ್ತ ಹರಿಸಿದ್ದಾರೆ. ಇಂತಹ ಜನರು ಕಷ್ಟ ಅನುಭವಿಸುವುದು ಸರಿಯಲ್ಲ ಎಂದು ತಿಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT