ಭಾರತದ ಚಲನಚಿತ್ರ ಮತ್ತು ಕಿರುತೆರೆ ನಿರ್ಮಾಪಕರ ಸಂಘದ ಅಧ್ಯಕ್ಷ ಮುಕೇಷ್ ಭಟ್ 
ದೇಶ

ಭವಿಷ್ಯದಲ್ಲಿ ಎಂದಿಗೂ ಪಾಕ್ ಕಲಾವಿದರೊಂದಿಗೆ ಕೆಲಸ ಮಾಡೋಲ್ಲ: ಮುಖೇಶ್ ಭಟ್

ಪಾಕಿಸ್ತಾನ ಕಲಾವಿದ ಫವಾದ್ ಖಾನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ 'ಎ ದಿಲ್ ಹೇ ಮುಷ್ಕಿಲ್' ಚಿತ್ರ ವಿವಾದಕ್ಕೆ ಸಂಬಂಧಿಸಿದಂತೆ ಮುಂದೆ ಭವಿಷ್ಯದಲ್ಲಿ ಎಂದಿಗೂ ಪಾಕಿಸ್ತಾನ ಕಲಾವಿದರೊಂದಿಗೆ ಕೆಲಸ ಮಾಡುವುದಿಲ್ಲ ಎಂದು...

ಮುಂಬೈ: ಪಾಕಿಸ್ತಾನ ಕಲಾವಿದ ಫವಾದ್ ಖಾನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ 'ಎ ದಿಲ್ ಹೇ ಮುಷ್ಕಿಲ್' ಚಿತ್ರ ವಿವಾದಕ್ಕೆ ಸಂಬಂಧಿಸಿದಂತೆ ಮುಂದೆ ಭವಿಷ್ಯದಲ್ಲಿ ಎಂದಿಗೂ ಪಾಕಿಸ್ತಾನ ಕಲಾವಿದರೊಂದಿಗೆ ಕೆಲಸ ಮಾಡುವುದಿಲ್ಲ ಎಂದು ಭಾರತದ ಚಲನಚಿತ್ರ ಮತ್ತು ಕಿರುತೆರೆ ನಿರ್ಮಾಪಕರ ಸಂಘದ ಅಧ್ಯಕ್ಷ ಮುಕೇಷ್ ಭಟ್ ಅವರು ಹೇಳಿದ್ದಾರೆ.

ಕರಣ್ ಜೋಹರ್ ನಿರ್ದೇಶನದ ಎ ದಿಲ್ ಹೇ ಮುಷ್ಕಿಲ್ ಚಿತ್ರ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಕೇಷ್ ಭಟ್ ಅವರು ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ, ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಮಾತುಕತೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ ಪ್ರತಿಕ್ರಿಯೆ ನೀಡಿರುವ ಅವರು, ಚಿತ್ರ ನಿರ್ಮಾಪಕರು ಮುಂದೆ ಭವಿಷ್ಯದಲ್ಲಿ ಎಂದಿಗೂ ಪಾಕಿಸ್ತಾನ ಕಲಾವಿದರೊಂದಿಗೆ ಕೆಲಸ ಮಾಡುವುದಿಲ್ಲ. ಇದು ನಮ್ಮ ಮಂಡಳಿಯ ನಿರ್ಣಯವಾಗಿದ್ದು, ಮಂಡಳಿಯ ನಿರ್ಣಯವನ್ನು ಪಾಲಿಸುವಂತೆ ಎಲ್ಲಾ ನಿರ್ಮಾಪಕರಿಗೂ ಸೂಚನೆ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ದೇಶದ ಜನತೆಯ ಭಾವನೆಗಳಿಗೆ ಮೊದಲ ಆದ್ಯತೆಯನ್ನು ನೀಡಬೇಕು. ರಕ್ಷಣಾ ಸಚಿವಾಲಯದ ಕಲ್ಯಾಣಕ್ಕೆ ಸಹಾಯ ಮಾಡುವುದಾಗಿ ಕರಣ್ ಜೋಹರ್ ಸೇರಿದಂತೆ ಇನ್ನಿತರೆ ನಿರ್ಮಾಪಕರು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT