ಕೇರಳದಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿ 
ದೇಶ

ಕೇರಳದಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

ಕೇರಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಾಳಿ ಮುಂದುವರೆದಿದ್ದು, ಅ.21 ರಂದು ತ್ರಿಶೂರಿನಲ್ಲಿ ಓರ್ವ ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿ ನಡೆದಿದೆ.

ತ್ರಿಶೂರ್: ಕೇರಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಾಳಿ ಮುಂದುವರೆದಿದ್ದು, ಅ.21 ರಂದು ತ್ರಿಶೂರಿನಲ್ಲಿ ಓರ್ವ ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿ ನಡೆದಿದೆ. ದಾಳಿಯಿಂದ ತೀವ್ರವಾಗಿ ಗಾಯಗೊಂಡಿರುವ ಕಾರ್ಯಕರ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಿಜೆಪಿ ತನ್ನ ಕಾರ್ಯಕರ್ತನ ಮೇಲೆ ನಡೆದಿರುವ ದಾಳಿಗೆ ಸಿಪಿಐ(ಎಂ) ಪಕ್ಷವನ್ನು ದೂಷಿಸಿದೆ. ಕೇರಳದಲ್ಲಿ ಬಿಜೆಪಿ, ಸಿಪಿಐ(ಎಂ) ಕಾರ್ಯಕರ್ತರ ನಡುವಿನ ಘರ್ಷಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಕೇರಳ ವಿಧಾನಸಭೆಯಲ್ಲಿ ಕಳೆದ ವಾರ ನಿಲುವಳಿ ಸೂಚನೆ ಮಂಡಿಸಿತ್ತು.
ಕೇರಳದ ಪ್ರಧಾನ ವಿರೋಧಪಕ್ಷವಾಗಿರುವ ಕಾಂಗ್ರೆಸ್, ಬಿಜೆಪಿ- ಕಮ್ಯುನಿಷ್ಟ್ ಸಂಘಟನೆಯ ಕಾರ್ಯಕರ್ತರ ನಡುವಿನ ಮಾರಾಮಾರಿ, ಹತ್ಯೆಗಳಿಂದಾಗಿ ಕೇರಳ ಹತ್ಯಾಕಾಂಡದ ರಾಜಧಾನಿಯಾಗುತ್ತಿದೆ ಎಂದು ಆರೋಪಿಸಿದೆ. ಆದರೆ ಕಾಂಗ್ರೆಸ್ ನ ಆರೋಪವನ್ನು ತಳ್ಳಿಹಾಕಿರುವ ಕೇರಳ ಸಿಎಂ ಪಿಣರಾಯಿ ವಿಜಯ್, ಆರ್ ಎಸ್ ಎಸ್ ಸಂಘಟನೆ ಉದ್ದೇಶಪೂರ್ವಕವಾಗಿ ಕಣ್ಣೂರಿನಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಲು ಯತ್ನಿಸುತ್ತಿದೆ ಶಾಂತಿ ಮಾತುಕತೆಗೆ ಕರೆದರೂ ಬಿಜೆಪಿ ಅದರಿಂದ ದೂರ ಉಳಿದಿದೆ ಎಂದು ವಿಜಯ್ ಪಿಣರಾಯಿ ಹೇಳಿದ್ದಾರೆ. ಒಂದು ತಿಂಗಳಲ್ಲಿ ಕಣ್ಣೂರಿನಲ್ಲಿ ಬಿಜೆಪಿ ಹಾಗೂ ಸಿಪಿಐ(ಎಂ) ನ ತಲಾ ಒಬ್ಬರು ಕಾರ್ಯಕರ್ತರು ಹತ್ಯೆಗೀಡಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ನೀರು ಹಂಚಿಕೆ: ತಮಿಳುನಾಡು ಅರ್ಜಿಯನ್ನು ಸುಪ್ರೀಂನಲ್ಲಿ ಪ್ರಶ್ನಿಸಲು ಅಧಿಕಾರಿಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ನಿರ್ದೇಶನ

ಹೈಕೋರ್ಟ್‌ನಿಂದ ಜೀವಾವಧಿ ಶಿಕ್ಷೆಗೆ ತಡೆ: ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹತೆ ರದ್ದು!

ಸಂಪುಟ ವಿಸ್ತರಣೆಯಲ್ಲಿ ಬಿಗ್ ಟ್ವಿಸ್ಟ್: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು; ಕೊನೆ ಕ್ಷಣದಲ್ಲಿ ಒಬ್ಬರಿಗೆ ಕೊಕ್!

ಭಾವೋದ್ವೇಗಕ್ಕೆ ಒಳಗಾಗಿ ರಾಜೀನಾಮೆ ನೀಡಬೇಡಿ: ಪಕ್ಷ ನಿಮ್ಮ ಸೇವೆ ಮರೆಯಲ್ಲ; ಅಸಮಾಧಾನಿತ ಶಾಸಕರಿಗೆ ಬಿ.ಕೆ ಹರಿಪ್ರಸಾದ್ ಮನವಿ

ಕಾಂಗ್ರೆಸ್‌ ಲೆಟರ್‌ಹೆಡ್‌ನಲ್ಲಿ ಸ್ಪೀಕರ್‌ ಹೆಸರು; ಮತ್ತೊಂದು ಕೆಟ್ಟ ಸಂಪ್ರದಾಯಕ್ಕೆ ನಾಂದಿ: ಸುರೇಶ್‌ ಕುಮಾರ್‌ ಕಿಡಿ