ಗಡಿ ಭದ್ರತಾ ಸೇನೆಯ ಇನ್ಸ್ ಪೆಕ್ಟರ್ ಜನರಲ್ ಡಿ.ಕೆ. ಉಪಾಧ್ಯಾಯ್ 
ದೇಶ

ದಾಳಿ ನಡೆಸುತ್ತಿರುವ ಪಾಕ್ ಸೇನೆಗೆ ಭಾರತೀಯ ಯೋಧರಿಂದ ದಿಟ್ಟ ಉತ್ತರ: ಐಜಿ ಡಿ.ಕೆ. ಉಪಾಧ್ಯಾಯ್

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಹೀರಾನಗರ್ ಸೆಕ್ಟರ್ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮವನ್ನು ಉಲ್ಲಂಘಿಸಿದ್ದು, ಪಾಕಿಸ್ತಾನ ಸೇನೆಯ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು...

ಹೀರಾನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಹೀರಾನಗರ್ ಸೆಕ್ಟರ್ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮವನ್ನು ಉಲ್ಲಂಘಿಸಿದ್ದು, ಪಾಕಿಸ್ತಾನ ಸೇನೆಯ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ಗಡಿ ಭದ್ರತಾ ಸೇನೆಯ ಇನ್ಸ್ ಪೆಕ್ಟರ್ ಜನರಲ್ ಡಿ.ಕೆ. ಉಪಾಧ್ಯಾಯ್ ಅವರು ಹೇಳಿದ್ದಾರೆ.

ಗಡಿಯಲ್ಲಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಲೇ ಇದೆ. ನಿನ್ನೆ ರಾತ್ರಿ ಕೂಡ ಕಥುವಾ ಜಿಲ್ಲೆಯ ಗಡಿಯಲ್ಲೂ ಅಪ್ರಚೋದಿತ ಗುಂಡಿನ ದಾಳಿಯನ್ನು ನಡೆಸಿದೆ. ಪಾಕಿಸ್ತಾನ ಸೇನೆಯ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡುತ್ತಿದ್ದು, ಓರ್ವ ಉಗ್ರ ಸೇರಿದಂತೆ 7 ಮಂದಿ ಪಾಕಿಸ್ತಾನ ಯೋಧರನ್ನು ಹತ್ಯೆ ಮಾಡಲಾಗಿದೆ ಎಂದು ಉಪಾಧ್ಯಾಯ್ ಅವರು ಹೇಳಿದ್ದಾರೆ.

60ಎಂಎಂ, 82 ಎಂಎಂ ಮಾರ್ಟರ್, ಎಂಎಂಜಿಗಳು, ಎಲ್ಎಂಜಿಗಳು, ಎಕೆ-47ಗಳನ್ನು ಬಳಸಿ ಪಾಕಿಸ್ತಾನ ಸೇನೆ ಭಾರತೀಯ ಸೇನೆ ದಾಳಿ ನಡೆಸಿತ್ತು. ದಾಳಿ ವೇಳೆ ಪೇದೆ ಗುರ್ನಾಮ್ ಎಂಬುವವರಿಗೆ ಗಾಯವಾಗಿದೆ.

ಪಾಕಿಸ್ತಾನ ಸೇನೆ ಇದೇ ರೀತಿಯಾಗಿ ದಾಳಿ ನಡೆಸುತ್ತಲೇ ಇದ್ದರೆ, ಪ್ರತ್ಯುತ್ತರವನ್ನು ಹೇಗೆ ನೀಡಬೇಕೆಂಬುದು ಭಾರತೀಯ ಸೇನೆಗೆ ತಿಳಿಸಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT