ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ 
ದೇಶ

ಕದನ ವಿರಾಮ ಉಲ್ಲಂಘನೆ ಸಮಸ್ಯೆಗೆ ಅಂತಿಮ ಪರಿಹಾರ ಹುಡುಕಿ: ಕೇಂದ್ರಕ್ಕೆ ಕಾಂಗ್ರೆಸ್

ಗಡಿಯಲ್ಲಿ ಪಾಕಿಸ್ತಾನ ಸೇನೆ ಪದೇ ಪದೇ ಕದನ ವಿರಾಮವನ್ನು ಉಲ್ಲಂಘಿಸುತ್ತಿದ್ದು, ಕದನ ವಿರಾಮ ಉಲ್ಲಂಘನೆ ಸಮಸ್ಯೆಗೆ ಅಂತಿಮ ಪರಿಹಾರವನ್ನು ಹುಡುಕಿ ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್...

ನವದೆಹಲಿ: ಗಡಿಯಲ್ಲಿ ಪಾಕಿಸ್ತಾನ ಸೇನೆ ಪದೇ ಪದೇ ಕದನ ವಿರಾಮವನ್ನು ಉಲ್ಲಂಘಿಸುತ್ತಿದ್ದು, ಕದನ ವಿರಾಮ ಉಲ್ಲಂಘನೆ ಸಮಸ್ಯೆಗೆ ಅಂತಿಮ ಪರಿಹಾರವನ್ನು ಹುಡುಕಿ ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಶನಿವಾರ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅವರು, ಮಾಡಬೇಕಿದ್ದನ್ನೇ ಇಂದು ನಮ್ಮ ಭಾರತೀಯ ಯೋಧರು ಮಾಡಿದ್ದಾರೆ. ತಮ್ಮ ಕರ್ತವ್ಯದಂತೆಯೇ ಯೋಧರು ಸರಿಯಾದ ಕೆಲಸವನ್ನೇ ಮಾಡಿದ್ದಾರೆ. ಆದರೆ, ಗಡಿಯಲ್ಲಿ ಪಾಕಿಸ್ತಾನ ಸೇನೆ ಪದೇ ಪದೇ ಕದನ ವಿರಾಮವನ್ನು ಉಲ್ಲಂಘಿಸುತ್ತಲೇ ಇದೆ. ಗಡಿ ನುಸುಳಲು ಅಪ್ರಚೋದಿತ ಗುಂಡಿನ ದಾಳಿನ್ನು ನಡೆಸುತ್ತಿದೆ. ಇಂತಹ ಸಮಯದಲ್ಲಿ ಕದನ ವಿರಾಮ ಉಲ್ಲಂಘನೆ ಸಮಸ್ಯೆಗೆ ಅಂತಿರ ಪರಿಹಾರವನ್ನು ಕಂಡು ಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಇಷ್ಟು ಮಂದಿ ಹತ್ಯೆಯಾಗಿದ್ದಾರೆಂದು ಹೇಗೆ ಲೆಕ್ಕ ಹಾಕುತ್ತಾರೋ ಗೊತ್ತಿಲ್ಲ. ಆದರೆ, ಸೇನೆಗೆ ತನ್ನದೇ ಆದಂತಹ ಲೆಕ್ಕಾಚಾರ ಹಾಗೂ ವಿಧಾನಗಳಿರುತ್ತವೆ. ಇದರಂತೆಯೇ ಭಾರತೀಯ ಯೋಧರು ಕಾರ್ಯನಿರ್ವಹಿಸುತ್ತಾರೆ. ಭಾರತೀಯ ಸೇನೆ ನಮಗೆ ನಂಬಿಕೆಯಿದೆ. ಭಾರತೀಯ ಸೇನೆ ನೀಡಿರುವ ಮಾಹಿತಿಯಂತೆಯೇ ಪಾಕಿಸ್ತಾನದ ಕಡೆಯಿಂದಲೂ ಮಾಹಿತಿಗಳು ಬರುತ್ತಿವೆ. ಪಾಕಿಸ್ತಾನ ಚಾನೆಲ್ ಗಳಲ್ಲಿಯೂ ಯೋಧರು ನೀಡಿರುವ ಮಾಹಿತಿಗಳೇ ಬರುತ್ತಿವೆ. ಪಾಕಿಸ್ತಾನ ಸೈನಿಕರು ಹತ್ಯೆಯಾಗಿರುವುದು ಇದರಿಂದ ಖಚಿತವಾಗುತ್ತವೆ ಎಂದು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಹೀರಾ ನಗರದ ಗಡಿ ಬಳಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿಯನ್ನು ನಡೆಸಿತ್ತು. ಪಾಕಿಸ್ತಾನ ಸೈನಿಕರ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡುವ ಮೂಲಕ ಗಡಿ ನುಸುಳಲು ಯತ್ನಿಸುತ್ತಿದ್ದ ಓರ್ವ ಉಗ್ರ ಸೇರಿದಂತೆ 7 ಮಂದಿ ಪಾಕಿಸ್ತಾನ ಸೈನಿಕರನ್ನು ಹತ್ಯೆ ಮಾಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT