ಪ್ರದೀಪ್ ಕುಮಾರ್ ಅಮಾತ್ 
ದೇಶ

ಪ್ರದೀಪ್ ಕುಮಾರ್ ಅಮತ್ ಒಡಿಶಾ ನೂತನ ಆರೋಗ್ಯ ಸಚಿವ

24 ಜನರನ್ನು ಬಲಿ ಪಡೆದ ಎಎಂಯು ಆಸ್ಪತ್ರೆಯ ಅಗ್ನಿ ಅವಘಡದ ನೈತಿಕ ಹೊಣೆಹೊತ್ತು ಒಡಿಶಾ ಆರೋಗ್ಯ ಸಚಿವ ಅತನು ಸಬ್ಯಸಾಚಿ ನಾಯಕ್....

ಭುವನೇಶ್ವರ: 24 ಜನರನ್ನು ಬಲಿ ಪಡೆದ ಎಎಂಯು ಆಸ್ಪತ್ರೆಯ ಅಗ್ನಿ ಅವಘಡದ ನೈತಿಕ ಹೊಣೆಹೊತ್ತು ಒಡಿಶಾ ಆರೋಗ್ಯ ಸಚಿವ ಅತನು ಸಬ್ಯಸಾಚಿ ನಾಯಕ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಇದೀಗ ಅವರ ಖಾತೆಯನ್ನು ಹಣಕಾಸು ಸಚಿವ ಪ್ರದೀಪ್ ಕುಮಾರ್ ಅಮತ್ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ.
ನಾಯಕ್ ಅವರ ಬಳಿ ಇದ್ದ ಆರೋಗ್ಯ ಖಾತೆಯನ್ನು ಪ್ರದೀಪ್ ಕುಮಾರ್ ಅಮತ್ ಅವರಿಗೆ ಹಾಗೂ ಮಾಹಿತಿ ಮತ್ತು ಸಾರ್ವಜನಿಕ ಸಂಬಂಧ ಖಾತೆಯನ್ನು ಅರಣ್ಯ ಮತ್ತು ಪರಿಸರ ಸಚಿವ ಬಿಕ್ರಮ್ ಕೇಶರಿ ಅರುಖಾ ಅವರಿಗೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅರುಖಾ ಅವರು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ತವರು ಜಿಲ್ಲೆ ಗಂಜಾಮ್ ನ ಪ್ರಭಾವಿ ನಾಯಕರಾಗಿದ್ದು, ಅವರು ಈಗಾಗಲೇ ಸಂಸದೀಯ ಖಾತೆಯನ್ನು ಸಹ ಹೊಂದಿದ್ದಾರೆ.
ನವೀನ್ ಪಟ್ನಾಯಕ್ ಅವರ ಸಂಪುಟದಲ್ಲಿ ಅಮತ್ ಮತ್ತು ಅರುಖಾ ಇಬ್ಬರು ಹಿರಿಯ ಸಚಿವರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT