ಮಣಿಪುರ ಸಿಎಂ ಒಕ್ರೋಮ್ ಇಬೋಬಿ ಸಿಂಗ್ (ಸಂಗ್ರಹ ಚಿತ್ರ) 
ದೇಶ

ಮಣಿಪುರ ಸಿಎಂ ಮೇಲೆ ಗುಂಡಿನ ದಾಳಿ; ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು

ಮಣಿಪುರ ರಾಜ್ಯದ ಮುಖ್ಯಮಂತ್ರಿ ಒಕ್ರೋಮ್ ಇಬೋಬಿ ಸಿಂಗ್ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಕೂದಲೆಳೆ ಅಂತರದಲ್ಲಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಂಫಾಲ: ಮಣಿಪುರ ರಾಜ್ಯದ ಮುಖ್ಯಮಂತ್ರಿ ಒಕ್ರೋಮ್ ಇಬೋಬಿ ಸಿಂಗ್ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಕೂದಲೆಳೆ ಅಂತರದಲ್ಲಿ ಅವರು ಪ್ರಾಣಾಪಾಯದಿಂದ  ಪಾರಾಗಿದ್ದಾರೆ.

ಇಂದು ಮುಂಜಾನೆಯಷ್ಟೇ ಉಖ್ರುಲ್ ಜಿಲ್ಲೆಯಲ್ಲಿ ಸರಣಿ ಐಇಡಿ ಬಾಂಬ್ ಸ್ಫೋಟಗೊಂಡು ಇಬ್ಬರು ಯೋಧರು ಗಾಯಗೊಂಡಿದ್ದರು. ಇದಾದ ಬೆನ್ನಲ್ಲೇ ಇಂದು ಮುಖ್ಯಮಂತ್ರಿ ಒಕ್ರೋಮ್  ಇಬೋಬಿ ಸಿಂಗ್ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಸಲುವಾಗಿ ಸಿಎಂ ಒಕ್ರೋಮ್ ಇಬೋಬಿ ಸಿಂಗ್ ಅವರು ಉಖ್ರುಲ್ ಜಿಲ್ಲೆಗೆ  ಭೇಟಿ ನೀಡಿದ್ದರು. ಹೆಲಿಕಾಪ್ಟರ್ ನಲ್ಲಿ ಆಗಮಿಸಿದ ಅವರು ಹೆಲಿಪ್ಯಾಡ್ ನಲ್ಲಿ ಇಳಿಯುತ್ತಿದ್ದಂತೆಯೇ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ.

ಅದೃಷ್ಟವಶಾತ್ ಗುಂಡು ಗುರಿ ತಪ್ಪಿದ್ದು, ಕೂದಲೆಳೆ ಅಂತರದಲ್ಲಿ ಒಕ್ರೋಮ್ ಇಬೋಬಿ ಸಿಂಗ್ ಅವರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಸ್ತುತ ಘಟನಾ ಸ್ಥಳದ ಸುತ್ತಮುತ ಪೊಲೀಸರ  ಶೋಧ ಕಾರ್ಯ ನಡೆಸುತ್ತಿದ್ದು, ಶಂಕಿತರಿಗಾಗಿ ತೀವ್ರ ತಪಾಸಣೆ ನಡೆಸುತ್ತಿದ್ದಾರೆ.

ಜೀವಂತ ಬಾಂಬ್ ನಿಷ್ಕ್ರಿಯ

ಇದೇ ವೇಳೆ ನೂತನವಾಗಿ ನಿರ್ಮಾಣವಾಗುತ್ತಿರುವ ಆಸ್ಪತ್ರೆ ಆವರಣದಲ್ಲಿ ಜೀವಂತ ಬಾಂಬ್ ವೊಂದು ಪತ್ತೆಯಾಗಿದ್ದು, ಅದನ್ನು ಸಿಬ್ಬಂದಿಗಳು ನಿಷ್ಕ್ರಿಯ ಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT