ಮಣಿಪುರ ಸಿಎಂ ಒಕ್ರೋಮ್ ಇಬೋಬಿ ಸಿಂಗ್ (ಸಂಗ್ರಹ ಚಿತ್ರ) 
ದೇಶ

ಮಣಿಪುರ ಸಿಎಂ ಮೇಲೆ ಗುಂಡಿನ ದಾಳಿ; ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು

ಮಣಿಪುರ ರಾಜ್ಯದ ಮುಖ್ಯಮಂತ್ರಿ ಒಕ್ರೋಮ್ ಇಬೋಬಿ ಸಿಂಗ್ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಕೂದಲೆಳೆ ಅಂತರದಲ್ಲಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಂಫಾಲ: ಮಣಿಪುರ ರಾಜ್ಯದ ಮುಖ್ಯಮಂತ್ರಿ ಒಕ್ರೋಮ್ ಇಬೋಬಿ ಸಿಂಗ್ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಕೂದಲೆಳೆ ಅಂತರದಲ್ಲಿ ಅವರು ಪ್ರಾಣಾಪಾಯದಿಂದ  ಪಾರಾಗಿದ್ದಾರೆ.

ಇಂದು ಮುಂಜಾನೆಯಷ್ಟೇ ಉಖ್ರುಲ್ ಜಿಲ್ಲೆಯಲ್ಲಿ ಸರಣಿ ಐಇಡಿ ಬಾಂಬ್ ಸ್ಫೋಟಗೊಂಡು ಇಬ್ಬರು ಯೋಧರು ಗಾಯಗೊಂಡಿದ್ದರು. ಇದಾದ ಬೆನ್ನಲ್ಲೇ ಇಂದು ಮುಖ್ಯಮಂತ್ರಿ ಒಕ್ರೋಮ್  ಇಬೋಬಿ ಸಿಂಗ್ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಸಲುವಾಗಿ ಸಿಎಂ ಒಕ್ರೋಮ್ ಇಬೋಬಿ ಸಿಂಗ್ ಅವರು ಉಖ್ರುಲ್ ಜಿಲ್ಲೆಗೆ  ಭೇಟಿ ನೀಡಿದ್ದರು. ಹೆಲಿಕಾಪ್ಟರ್ ನಲ್ಲಿ ಆಗಮಿಸಿದ ಅವರು ಹೆಲಿಪ್ಯಾಡ್ ನಲ್ಲಿ ಇಳಿಯುತ್ತಿದ್ದಂತೆಯೇ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ.

ಅದೃಷ್ಟವಶಾತ್ ಗುಂಡು ಗುರಿ ತಪ್ಪಿದ್ದು, ಕೂದಲೆಳೆ ಅಂತರದಲ್ಲಿ ಒಕ್ರೋಮ್ ಇಬೋಬಿ ಸಿಂಗ್ ಅವರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಸ್ತುತ ಘಟನಾ ಸ್ಥಳದ ಸುತ್ತಮುತ ಪೊಲೀಸರ  ಶೋಧ ಕಾರ್ಯ ನಡೆಸುತ್ತಿದ್ದು, ಶಂಕಿತರಿಗಾಗಿ ತೀವ್ರ ತಪಾಸಣೆ ನಡೆಸುತ್ತಿದ್ದಾರೆ.

ಜೀವಂತ ಬಾಂಬ್ ನಿಷ್ಕ್ರಿಯ

ಇದೇ ವೇಳೆ ನೂತನವಾಗಿ ನಿರ್ಮಾಣವಾಗುತ್ತಿರುವ ಆಸ್ಪತ್ರೆ ಆವರಣದಲ್ಲಿ ಜೀವಂತ ಬಾಂಬ್ ವೊಂದು ಪತ್ತೆಯಾಗಿದ್ದು, ಅದನ್ನು ಸಿಬ್ಬಂದಿಗಳು ನಿಷ್ಕ್ರಿಯ ಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

SCROLL FOR NEXT