ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ 
ದೇಶ

ಭಯೋತ್ಪಾದನೆಗೆ ನೀಡುವ ಬೆಂಬಲ ಕೂಡ ಕೆಲವೊಮ್ಮೆ ತಿರುಗುಬಾಣವಾಗಬಹುದು: ಪರಿಕ್ಕರ್

ಭಯೋತ್ಪಾದನೆಗೆ ಯಾವುದೇ ದೇಶವಾದರೂ ಅದಕ್ಕೆ ಬೆಂಬಲವನ್ನು ನೀಡಬಾರದು. ಕೆಲವೊಮ್ಮೆ ನಾವು ಬೀಸುವ ಬಾಣವೇ ನಮಗೆ ತಿರುಗುಬಾಣವಾಗಿ ಪರಿಣಮಿಸುತ್ತದೆ ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್...

ನವದೆಹಲಿ: ಭಯೋತ್ಪಾದನೆಗೆ ಯಾವುದೇ ದೇಶವಾದರೂ ಅದಕ್ಕೆ ಬೆಂಬಲವನ್ನು ನೀಡಬಾರದು. ಕೆಲವೊಮ್ಮೆ ನಾವು ಬೀಸುವ ಬಾಣವೇ ನಮಗೆ ತಿರುಗುಬಾಣವಾಗಿ ಪರಿಣಮಿಸುತ್ತದೆ ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಮಂಗಳವಾರ ಹೇಳಿದ್ದಾರೆ.

ಬಲೂಚಿಸ್ತಾದ ಖ್ವೆಟ್ಟಾದಲ್ಲಿ ನಡೆದ ಉಗ್ರರ ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಭಯೋತ್ಪಾದನೆ ಎಲ್ಲಿಯೇ ಇದ್ದರೂ, ಯಾವುದೇ ರೂಪದಲ್ಲಿಯೇ ಇದ್ದರೂ ಅದನ್ನು ಎಂದಿಗೂ ಒಪ್ಪಿಕೊಳ್ಳಬಾರದು. ಯಾವುದೇ ರೀತಿಯ ಹಿಂಸಾಚಾರವನ್ನು ಭಾರತ ಎಂದಿಗೂ ಸಹಿಸುವುದಿಲ್ಲ. ದಾಳಿಯಲ್ಲಿ ಮೃತರಾದ ಜನರಿಗೆ ಸಂತಾಪವನ್ನು ಸೂಚಿಸುತ್ತೇನೆಂದು ಹೇಳಿದ್ದಾರೆ.

ಯಾವುದೇ ದೇಶವನ್ನು ಉದ್ದೇಶಿಸಿ, ಗುರಿಯಾಗಿಟ್ಟುಕೊಂಡು ನಾನು ವಿವರಣೆಯನ್ನು ನೀಡುತ್ತಿಲ್ಲ. ಭಯೋತ್ಪಾದನಾ ಚಟುವಟಿಕೆಗಳಲ್ಲಿ ಭಾಗಿಯಾಗುವ ವಿದೇಶಿ ನಟರನ್ನು ಮಟ್ಟಹಾಕಬೇಕಿದೆ. ಭಯೋತ್ಪಾದನೆಗೆ ನೀಡುವ ಪ್ರಚೋದನೆಗಳು ಕೆಲವೊಮ್ಮೆ ನಮಗೇ ತಿರುಗುಬಾಣವಾಗಿ ಪರಿಣಮಿಸಿಬಿಡುತ್ತವೆ. ಈ ದಾಳಿ ಕೂಡ ಅದಕ್ಕೆ ಉದಾಹರಣೆಯಾಗಿದೆ ಎಂದು ತಿಳಿಸಿದ್ದಾರೆ.

ಬಲೂಚಿಸ್ತಾನದ ಖ್ವೆಟ್ಟಾದ ಪೊಲೀಸ್ ತರಬೇತಿ ಶಾಲೆಯ ಮೇಲೆ ಉಗ್ರರ ಗುಂಪೊಂದು ದಾಳಿ ಮಾಡಿ 60 ಮಂದಿ ಪೊಲೀಸರನ್ನು ಬಲಿ ಪಡೆದುಕೊಂಡಿದೆ. ದಾಳಿಯಲ್ಲಿ 100ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸ್ಫೋಟದ ಅಪರಾಧಿಗಳು ಎಲ್ಲೇ ಅಡಗಿದ್ದರೂ ಹಿಡಿದು ಅವರಿಗೆ ಕಠಿಣ ಶಿಕ್ಷೆ ಕೊಡಿಸುತ್ತೇವೆ: ಅಮಿತ್ ಶಾ

ಪ್ರಧಾನಿ ಮೋದಿ ಭೇಟಿಯಾದ ಸಿಎಂ; ರಾಯಚೂರಿಗೆ ಏಮ್ಸ್, ಪ್ರವಾಹ ಪರಿಹಾರಕ್ಕೆ ಮನವಿ

ದೆಹಲಿ ಸ್ಫೋಟಕ್ಕೂ ಮುನ್ನ ಹಮಾಸ್ ಮಾದರಿಯ ಭೀಕರ ದಾಳಿಗೆ ಯೋಜನೆ ರೂಪಿಸಿದ್ದ ಉಗ್ರರು!

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು, ICU ನಲ್ಲಿ ಚಿಕಿತ್ಸೆ!

ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸುತ್ತಿರುವ ಮದರಸಾ ಶಿಕ್ಷಕ: ಸಿಸಿಟಿವಿ ವಿಡಿಯೋ ವೈರಲ್!

SCROLL FOR NEXT