ದೇಶ

ಸೌಮ್ಯ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿಂದ ಗಂಭೀರ ತಪ್ಪಾಗಿದೆ: ಕಾಟ್ಜು

Shilpa D

ನವದೆಹಲಿ: ಸೌಮ್ಯ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಗಂಭೀರ ತಪ್ಪು ಮಾಡಿದೆ ಎಂದು ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು ಹೇಳಿದ್ದಾರೆ.

ಅಪರಾಧಿ ಗೋವಿಂದಚಾಮಿಯ ಗಲ್ಲು ಶಿಕ್ಷೆಯನ್ನು ಸುಪ್ರೀಂಕೋರ್ಟ್ ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿದೆ. ನ್ಯಾಯಮೂರ್ತಿಗಳಿಗೆ ಹೆಚ್ಚಿನ ಸಮಯ ಇಲ್ಲದ ಕಾರಣ ಪ್ರಕರಣದ ಬಗ್ಗೆ ಸಂಪೂರ್ಣ ಅಧ್ಯಯನ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಮಾರ್ಕಂಡೇಯ ಕಾಟ್ಜು ಅಭಿಪ್ರಾಯ ಪಟ್ಟಿದ್ದಾರೆ.

ಇದೇ ಮೊದಲ ಬಾರಿಗೆ ಖುದ್ದಾಗಿ ಹಾಜರಾಗುವಂತೆ ಸುಪ್ರೀಂ ಕೋರ್ಟ್ ನೊಟೀಸ್ ನೀಡಿರುವುದು ನನಗೆ ಬೇಸರ ತರಿಸಿದೆ ಎಂದು ತಮ್ಮ ಫೇಸ್ ಬುಕ್ ನಲ್ಲಿ ಬರೆದು ಕೊಂಡಿದ್ದಾರೆ.

SCROLL FOR NEXT