ರತನ್ ಟಾಟಾ-ಸೈರಸ್ ಮಿಸ್ತ್ರಿ 
ದೇಶ

ಏರ್ ಏಷಿಯಾ ಇಂಡಿಯಾ ಬಗ್ಗೆ ಸೈರಸ್ ಮಿಸ್ತ್ರಿಯವರ ಆರೋಪವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ: ಸರ್ಕಾರ

ಟಾಟಾ ಗ್ರೂಪ್ ನ ಅಧ್ಯಕ್ಷ ಸ್ಥಾನದಿಂದ ಸೈರಸ್ ಮಿಸ್ತ್ರಿಯವರನ್ನು ಪದಚ್ಯುತಗೊಳಿಸಿರುವುದು, ಏರ್ ಏಷಿಯಾ...

ನವದೆಹಲಿ: ಟಾಟಾ ಗ್ರೂಪ್ ನ ಅಧ್ಯಕ್ಷ ಸ್ಥಾನದಿಂದ ಸೈರಸ್ ಮಿಸ್ತ್ರಿಯವರನ್ನು ಪದಚ್ಯುತಗೊಳಿಸಿರುವುದು, ಏರ್ ಏಶಿಯಾ ಇಂಡಿಯಾ ಬಗ್ಗೆ ಅವರು ಬಹಿರಂಗಪಡಿಸಿರುವ ವಿಷಯಗಳ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ ಸೂಕ್ಷ್ಮವಾಗಿ ಗಮನಿಸುತ್ತಿದ್ದು ಯಾವುದಾದರೂ ಕ್ರಮ ತೆಗೆದುಕೊಳ್ಳಬೇಕೆಂದೆನಿಸಿದರೆ ಆ ಕುರಿತು ಗಮನಹರಿಸಲಾಗುವುದು ಎಂದು ಹೇಳಿದೆ.
ಯಾವುದೇ ಕಡೆಯಿಂದ ಯಾವುದಾದರೂ ಮಾಹಿತಿ ಸಿಗಲು ನಾವು ಕಾಯುತ್ತಿದ್ದೇವೆ ಎಂದು ನಾಗರಿಕ ವಿಮಾನಯಾನ ಕಾರ್ಯದರ್ಶಿ ಆರ್ಎನ್ ಚೌಬೆ ತಿಳಿಸಿದ್ದಾರೆ.
ಏರ್ ಏಷಿಯಾ ಜೊತೆಗೆ ಟಾಟಾ ಗ್ರೂಪ್ ನ ವಿಮಾನಯಾನ ಜಂಟಿ ಕಾರ್ಯದ ನೈತಿಕತೆಯನ್ನು ಪ್ರಶ್ನಿಸಿರುವ ಮಿಸ್ತ್ರಿ ವಿಧಿವಿಜ್ಞಾನ ತನಿಖೆಯ ಪ್ರಕಾರ ಭಾರತ ಮತ್ತು ಸಿಂಗಪುರದಲ್ಲಿ ಅಸ್ತಿತ್ವದಲ್ಲಿರದ ಘಟಕಗಳಲ್ಲಿ 22 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದಾರೆ.
ಯಾರಾದರೂ ಸಚಿವಾಲಯದ ಗಮನಕ್ಕೆ ಅಕ್ರಮ ವ್ಯವಹಾರವನ್ನು ತಂದರೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಸಚಿವಾಲಯ ಹೇಳಿದೆ.
ಟಾಟಾ ಗ್ರೂಪ್ ಅಧ್ಯಕ್ಷ ಸ್ಥಾನದಿಂದ ಮಿಸ್ತ್ರಿಯವರನ್ನು ಇದ್ದಕ್ಕಿದ್ದಂತೆ ಮೊನ್ನೆ ಸೋಮವಾರ ತೆಗೆದುಹಾಕಿ ಅವರ ಸ್ಥಾನಕ್ಕೆ ಅವರ ಹಿಂದಿನ ಅಧಿಕಾರಿ ರತನ್ ಟಾಟಾ ಅವರನ್ನು ಮುಂದಿನ ನಾಲ್ಕು ತಿಂಗಳ ಅವಧಿಗೆ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT