ರಾಜ್ಯ ಸಭಾ ಸದಸ್ಯ ಮುನಬ್ಬಾರ್ ಸಲೀಮ್ 
ದೇಶ

ಬೇಹುಗಾರಿಕೆ ಪ್ರಕರಣ: ಸಮಾಜವಾದಿ ಪಕ್ಷದ ಎಂಪಿ ಆಪ್ತ ಕಾರ್ಯದರ್ಶಿ ಬಂಧನ

ಬೇಹುಗಾರಿಕೆ ಆರೋಪದಲ್ಲಿ ಸಮಾಜವಾದಿ ಪಕ್ಷದ ಸಂಸದನ ಆಪ್ತ ಕಾರ್ಯದರ್ಶಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ...

ನವದೆಹಲಿ: ಬೇಹುಗಾರಿಕೆ ಆರೋಪದಲ್ಲಿ ಸಮಾಜವಾದಿ ಪಕ್ಷದ ಸಂಸದನ ಆಪ್ತ ಕಾರ್ಯದರ್ಶಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಗೂಢಚರ್ಯೆ ಆರೋಪದ ಮೇಲೆ ನಿನ್ನೆ ಪಾಕ್ ಹೈ ಕಮಿಷನರ್ ಸಿಬ್ಬಂದಿ ಬಂಧಸಿ ಆತನನ್ನು ದೇಶದಿಂದ ಉಚ್ಚಾಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ರಾಜ್ಯ ಸಭಾ ಸದಸ್ಯ ಮುನಬ್ಬಾರ್ ಆಪ್ತ ಕಾರ್ಯದರ್ಶಿ ಪರ್ಹತ್ ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ನಿನ್ನೆ ರಾತ್ರಿ ಪರ್ಹತ್ ನನ್ನು ಬಂಧಿಸಿರುವ ದೆಹಲಿ ಅಪರಾಧ ದಳ ಪೊಲೀಸರು ಆತನನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಪ್ರಕರಣದಲ್ಲಿ ಮತ್ತಷ್ಟು ಭಾಗಿಯಾಗಿರು ಶಂಕೆ ವ್ಯಕ್ತ ಪಡಿಸಿರುವ ಪೊಲೀಸರು ಅವರನ್ನೆಲ್ಲಾ ಸೆರೆ ಹಿಡಿಸಲು ಪ್ರಯತ್ನ ನಡೆಸಿದ್ದಾರೆ.

ಭಾರತದ ರಕ್ಷಣಾ ಇಲಾಖೆಯ ಮಾಹಿತಿ ಹಾಗೂ ದಾಖಲೆಗಳನ್ನು ಮತ್ತು ಗಡಿಯಲ್ಲಿ ಬಿಎಸ್‌ಎಫ್‌ ಯೋಧರ ನೇಮಕ ಕುರಿತ ಗೌಪ್ಯ ಮಾಹಿತಿಯನ್ನು ರವಾನೆ ಮಾಡಿದ ಆರೋಪ ಪಾಕ್‌ನ ಹೈ ಕಮಿಷನರ್ ಮೇಲಿದೆ. ಇದಕ್ಕೆ ಕೆಲ ಭಾರತೀಯರು ಸಹಾಯ ಮಾಡಿದ್ದಾರೆ ಎನ್ನಲಾಗಿದ್ದು ಈ ಸಂಬಂಧ ನಿನ್ನೆ ಜೋಧಪುರ್‌ ಮೂಲದ ಪಾಸ್‌ಪೋರ್ಟ್ ಹಾಗೂ ವಿಸಾ ಏಜೆಂಟ್‌  ಮೆಹಮೂದ್‌ ಅಕ್ತರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಶಕದ ಬಳಿಕ ಕೇರಳದಲ್ಲಿ ಕಾಂಗ್ರೆಸ್ ಅಧಿಕಾರ: ದೇವರ ಹೆಸರಿನಲ್ಲಿ ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್‌ ಪ್ರಮಾಣವಚನ ಸ್ವೀಕಾರ..!

'Lack Of Knowledge': ಪತ್ರಿಕಾ ಸ್ವಾತಂತ್ರ್ಯ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಡಚ್ ಪ್ರಧಾನಿ ಹೇಳಿಕೆ ತಿರಸ್ಕರಿಸಿದ ಭಾರತ!

COVID ಬಳಿಕ ವಿಶ್ವಕ್ಕೆ ಮತ್ತೊಂದು ಹೆಮ್ಮಾರಿ ಕಂಟಕ: ಕೆನಡಾದಲ್ಲಿ ಮಾರಣಾಂತಿಕ 'Hantavirus' ಮತ್ತೊಂದು ಸೋಂಕು ದೃಢ, ಹೆಚ್ಚಿದ ಆತಂಕ..!

ಅಧಿಕಾರ ಬದಲಾವಣೆ ಚರ್ಚೆ ಬೆನ್ನಲ್ಲೇ ಡಿಕೆಶಿ ಟೆಂಪಲ್ ರನ್: CM ಗಾದಿ ಕನಸು ಜೀವಂತ..!

94ನೇ ವಸಂತಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ: ಅಪ್ಪಾಜಿ ಕ್ಯಾಂಟೀನ್‌ನಲ್ಲಿ ಕೇವಲ 1 ರೂ.ಗೆ ಭೋಜನ ವ್ಯವಸ್ಥೆ..!

SCROLL FOR NEXT