ಕೇದಾರನಾಥ 
ದೇಶ

ಉತ್ತರಾಖಂಡ್: ಜಲಪ್ರಳಯಕ್ಕೆ ಸಿಲುಕಿದ್ದ ಅಂಚೆ ಕಚೇರಿ 3 ವರ್ಷಗಳ ನಂತರ ಪುನಾರಂಭ

ಉತ್ತರಾಖಂಡ್ ನಲ್ಲಿ 2013 ರಲ್ಲಿ ಸಂಭವಿಸಿದ್ದ ಜಲಪ್ರಳಯದಲ್ಲಿ ಕೊಚ್ಚಿ ಹೋಗಿದ್ದ ಕೇದಾರನಾಥ ದೇವಾಲಯದ ಬಳಿ ಇದ್ದ ಅಂಚೆ ಕಚೇರಿ ಈಗ ಮತ್ತೆ ಕಾರ್ಯಾರಂಭ ಮಾಡಿದೆ.

ಡೆಹ್ರಾಡೂನ್: ಉತ್ತರಾಖಂಡ್ ನಲ್ಲಿ 2013 ರಲ್ಲಿ ಸಂಭವಿಸಿದ್ದ ಜಲಪ್ರಳಯದಲ್ಲಿ ಕೊಚ್ಚಿ ಹೋಗಿದ್ದ ಕೇದಾರನಾಥ ದೇವಾಲಯದ ಬಳಿ ಇದ್ದ ಅಂಚೆ ಕಚೇರಿ ಈಗ ಮತ್ತೆ ಕಾರ್ಯಾರಂಭ ಮಾಡಿದೆ.

ಕೇದಾರನಾಥ ದೇವಾಲಯದ ಮುಖ್ಯ ಅರ್ಚಕರು ಅ.29 ರಂದು ಹೊಸ ಕಛೇರಿಯಿಯನ್ನು ಪೂಜೆ ಮಾಡುವ ಮೂಲಕ ಉದ್ಘಾಟಿಸಿದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 2013 ರ ಜೂನ್ ನಲ್ಲಿ ಜಲಪ್ರಳಯ ಉಂಟಾದ ಪರಿಣಾಮ 5,700 ಜನರು ಸಾವನ್ನಪ್ಪಿದ್ದರು,  ಜಲಪ್ರಳಯದಿಂದ ಉಂಟಾದ 3 ವರ್ಷಗಳ ನಂತರ ಹಾನಿಯನ್ನು ಸರಿಪಡಿಸಲಾಗಿದ್ದು, ಅಂಚೆ ಕಚೇರಿಯ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಿ ಪುನಃ ಪ್ರಾರಂಭವಾಗಿರುವುದು ಸಂತಸ ಮೂಡಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇದಾರನಾಥದಲ್ಲಿರುವ ಅಂಚೆ ಕಚೇರಿಯ ಪ್ರಧಾನ ಕಚೇರಿ ರುದ್ರಪ್ರಯಾಗದಲ್ಲಿದ್ದು, ವಿತರಣಾ ಕೇಂದ್ರವನ್ನಾಗಿ ಕೇದಾರನಾಥದಲ್ಲಿರುವ ಕಚೇರಿಯನ್ನು ಬಳಸಿಕೊಳ್ಳಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT