ಸಂಗ್ರಹ ಚಿತ್ರ 
ದೇಶ

ದಾಳಿಗೆ ದಿಟ್ಟ ಉತ್ತರ: ಗಡಿಯಲ್ಲಿ ಪಾಕಿಸ್ತಾನದ 4 ಕ್ಯಾಂಪ್'ಗಳು ನಾಶ

ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ಹಾಗೂ ಶೆಲ್ ಗಳ ದಾಳಿ ನಡೆಯುತ್ತಿದ್ದ ಪಾಕಿಸ್ತಾನ ಸೇನೆಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿದ್ದು, ಗಡಿ ನಿಯಂತ್ರಣ ರೇಖೆ ಬಳಿಯಿದ್ದ ಪಾಕಿಸ್ತಾನದ ನಾಲ್ಕು ಕ್ಯಾಂಪ್ ಗಳನ್ನು ನಾಶಪಡಿಸಿದೆ...

ಶ್ರೀನಗರ: ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ಹಾಗೂ ಶೆಲ್ ಗಳ ದಾಳಿ ನಡೆಯುತ್ತಿದ್ದ ಪಾಕಿಸ್ತಾನ ಸೇನೆಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿದ್ದು, ಗಡಿ ನಿಯಂತ್ರಣ ರೇಖೆ ಬಳಿಯಿದ್ದ ಪಾಕಿಸ್ತಾನದ ನಾಲ್ಕು ಕ್ಯಾಂಪ್ ಗಳನ್ನು ನಾಶಪಡಿಸಿದೆ.

ಸೀಮಿತ ದಾಳಿ ಬಳಿಕ ಭಾರತೀಯ ಸೇನೆಯನ್ನು ಗುರಿಯಾಗಿಸಿಕೊಂಡಿರುವ ಪಾಕಿಸ್ತಾನ ಸೇನೆ, ಗಡಿಯಲ್ಲಿ  ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ. ನಿನ್ನೆ ನಡೆದ ಗುಂಡಿನ ದಾಳಿಯಲ್ಲಿಯೂ ಭಾರತೀಯ ಯೋಧನನ್ನು ಪಾಕಿಸ್ತಾನದ ಉಗ್ರರು ಭೀಕರವಾಗಿ ಹತ್ಯೆ ಮಾಡಿದ್ದರು. ಯೋಧನ ದೇಹವನ್ನು ತುಂಡರಿಸಿದ್ದರು.

ಇದಕ್ಕೆ ಪ್ರತೀಕಾರವೆಂಬಂತೆ ಭಾರತೀಯ ಸೇನೆ ಪ್ರತ್ಯುತ್ತರವನ್ನು ನೀಡಿದ್ದು, ಕೇರಾನ್ ಸೆಕ್ಟರ್ ನ ಗಡಿ ನಿಯಂತ್ರಣದಲ್ಲಿದ್ದ ಪಾಕಿಸ್ತಾನ ಸೈನಿಕರ ಕ್ಯಾಂಪ್ ಗಳ ಮೇಲೆ ಭಾರೀ ಪ್ರಮಾಣದಲ್ಲಿ ಗುಂಡಿನ ದಾಳಿ ಮಾಡಿ ನಾಲ್ಕು ಕ್ಯಾಂಪ್ ಗಳನ್ನು ನಾಶಪಡಿಸಿದೆ ಎಂದು ಸೇನಾ ಮೂಲಗಳು ಮಾಹಿತಿ ನೀಡಿವೆ.  

ಪಾಕಿಸ್ತಾನ ಸೇನೆ ಗಡಿಯಲ್ಲಿ ಭಾರೀ ಪ್ರಮಾಣದಲ್ಲಿ ಅಪ್ರಚೋದಿತ ಗುಂಡಿನ ದಾಳಿಯನ್ನು ನಡೆಸುತ್ತಿದೆ. ಅಲ್ಲದೆ ಕೆರನ್ ಸೆಕ್ಟರ್ ಬಳಿ ಸಾಕಷ್ಟು ಬಾರಿ ಕದನ ವಿರಾಮವನ್ನು ಉಲ್ಲಂಘಿಸುತ್ತಿದೆ. ಪಾಕಿಸ್ತಾನ ಸೇನೆಯ ದಾಳಿಗೆ ಓರ್ವ ಯೋಧ, ನಾಗರೀಕರೊಬ್ಬರು ಗಾಯಗೊಂಡಿದ್ದಾರೆ. ಪಾಕಿಸ್ತಾನ ಸೈನಿಕರ ದಾಳಿಗೆ ಭಾರತೀಯ ಸೇನೆ ಕೂಡ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT