ಪುರಿ ಜಗನ್ನಾಥ ದೇವಾಲಯ 
ದೇಶ

ಪುರಿ ಜಗನ್ನಾಥ ದೇವಾಲಯದ ಬಗ್ಗೆ ಅವಹೇಳನಕಾರಿ ಬರಹ ಪ್ರಕಟ: ಕ್ಷಮೆಯಾಚಿಸಿದ ಏರ್ ಇಂಡಿಯಾ

ಪುರಿ ಜಗನ್ನಾಥ ದೇವಾಲಯದ ಬಗ್ಗೆ ತನ್ನ ನಿಯತಕಾಲಿಕದಲ್ಲಿ ಅವಹೇಳನಕಾರಿ ಬರಹ ಪ್ರಕಟಿಸಿದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಕ್ಷಮೆ ಕೇಳಿದೆ....

ಭುವನೇಶ್ವರ: ಪುರಿ ಜಗನ್ನಾಥ ದೇವಾಲಯದ ಬಗ್ಗೆ ತನ್ನ ನಿಯತಕಾಲಿಕದಲ್ಲಿ ಅವಹೇಳನಕಾರಿ ಬರಹ ಪ್ರಕಟಿಸಿದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಕ್ಷಮೆ ಕೇಳಿದೆ.

ಏರ್ ಇಂಡಿಯಾ ವಿಮಾನದ ಶುಭ್ ಯಾತ್ರಾ ನಿಯತಕಾಲಿಕದಲ್ಲಿ ಪುರಿ ಜಗನ್ನಾಥ ದೇವಾಲಯದ ಅಡುಗೆ ಮನೆಯಲ್ಲಿ ಮಾಂಸಾಹಾರ ಖಾದ್ಯಗಳನ್ನು ತಯಾರಿಸಲಾಗುತ್ತದೆ ಎಂದು ಪ್ರಕಟಿಸಲಾಗಿತ್ತು. ಈ ಸಂಬಂಧ ಕ್ಷಮೆ ಯಾಚಿಸಿರುವ ಏರ್ ಇಂಡಿಯಾ ಕೂಡಲೇ ಜಾರಿಗೆ ಬರುವಂತೆ ಶುಭಯಾತ್ರಾ ನಿಯತಕಾಲಿಕದ ಎಲ್ಲಾ ಪ್ರತಿಗಳನ್ನು ರದ್ದುಗೊಳಿಸಿದೆ, ಎಂದು ಏರ್ ಇಂಡಿಯಾ ಟ್ವೀಟ್ ಮಾಡಿದೆ.

ಏರ್ ಇಂಡಿಯಾದ ಶುಭ್ ಯಾತ್ರಾ ನಿಯತಕಾಲಿದಲ್ಲಿ 'Devotion Can Be Delicious' ಎಂಬ ಶೀರ್ಷಿಕೆಯಡಿ, ಲೇಖನ ಪ್ರಕಟಿಸಲಾಗಿತ್ತು.

ಪುರಿಯ ಜಗನ್ನಾಥ ದೇವಾಲಯದ ಅಡುಗೆ ಮನೆಯಲ್ಲಿ  ಸುಮಾರು ಒಂದು ಸಾವಿರ ಮಂದಿ ದಿನದ 24 ಗಂಟೆಯೂ ಅಡುಗೆ ತಯಾರಿಸುತ್ತಾರೆ,285 ಬಗೆಯ ಸಸ್ಯಹಾರಾ ಹಾಗೂ ಮಾಂಸಾಹಾರ ಖಾದ್ಯಗಳನ್ನು ಪ್ರತಿದಿನ ತಯಾರಿಸುತ್ತಾರೆ ಎಂದು ಬರೆಯಲಾಗಿತ್ತು.

ಇನ್ನೂ ಈ ಸಂಬಂಧ ಪ್ರತಿಕ್ರಿಯಿಸಿರುವ ಸಿಎಂ ನವೀನ್ ಪಟ್ನಾಯಕ್ ಇದೊಂದು ದುರಾದೃಷ್ಟಕರ ಘಟನೆ, ಪ್ರಕರಣ ಸಂಬಂಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT