ಸಂಗ್ರಹ ಚಿತ್ರ 
ದೇಶ

ಬೇಹುಗಾರಿಕೆ ವಿವಾದ: ಪಾಕ್' ತೊರೆದ ಭಾರತೀಯ ರಾಯಭಾರಿ ಸುರ್ಜಿತ್ ಸಿಂಗ್

ಪಾಕಿಸ್ತಾನದ ಸೇಡಿಗೆ ಗುರಿಯಾಗಿ ಬೇಹುಗಾರಿಕೆ ಆರೋಪ ಹೊತ್ತಿದ್ದ ಭಾರತೀಯ ರಾಯಭಾರಿ ಸುರ್ಜಿತ್ ಸಿಂಗ್ ಅವರು ಶನಿವಾರ ಪಾಕಿಸ್ತಾನವನ್ನು ತೊರೆದಿದ್ದಾರೆಂದು ಭಾನುವಾರ ಮೂಲಗಳಿಂದ...

ಇಸ್ಲಾಮಾಬಾದ್: ಪಾಕಿಸ್ತಾನದ ಸೇಡಿಗೆ ಗುರಿಯಾಗಿ ಬೇಹುಗಾರಿಕೆ ಆರೋಪ ಹೊತ್ತಿದ್ದ ಭಾರತೀಯ ರಾಯಭಾರಿ ಸುರ್ಜಿತ್ ಸಿಂಗ್ ಅವರು ಶನಿವಾರ ಪಾಕಿಸ್ತಾನವನ್ನು ತೊರೆದಿದ್ದಾರೆಂದು ಭಾನುವಾರ ಮೂಲಗಳಿಂದ ತಿಳಿದುಬಂದಿದೆ.

ರಕ್ಷಣಾ ಇಲಾಖೆಯ ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡುತ್ತಿದ್ದಾರೆಂದು ಹೇಳಿ ಕೆಲ ದಿನಗಳ ಹಿಂದಷ್ಟೇ ದೆಹಲಿ ಪೊಲೀಸರು ಪಾಕಿಸ್ತಾನ ರಾಯಭಾರಿ ಕಚೇರಿಯ ಅಧಿಕಾರಿಗಳನ್ನು ಬಂಧನಕ್ಕೊಳಪಡಿಸಿ ವಿಚಾರಣೆ ನಡೆಸಿತ್ತು. ಅಲ್ಲದೆ, ಗೂಡಾಚಾರ ನಡೆಸುತ್ತಿರುವ ಪಾಕಿಸ್ತಾನ ಅಧಿಕಾರಿಗಳು 48 ಗಂಟೆಯೊಳಗಾಗಿ ಭಾರತ ತೊರೆಯುವಂತೆ ಸೂಚನೆ ನೀಡಿತ್ತು.

ಇದರ ಬೆನ್ನಲ್ಲೇ ಭಾರತದ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದ ಪಾಕಿಸ್ತಾನ, ಏಟಿಗೆ ಏದುರೇಟು ಎಂಬಂತೆ ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಅಧಿಕಾರಿಗೆ ನೋಟಿಸ್ ವೊಂದನ್ನು ಜಾರಿ ಮಾಡಿತ್ತು. ಸುರ್ಜಿತ್ ಸಿಂಗ್ ಅವರು ಪಾಕಿಸ್ತಾನದಲ್ಲಿ ಬೇಹುಗಾರಿಕೆ ಮಾಡುತ್ತಿದ್ದಾರೆಂದು ಆರೋಪಿಸಿತ್ತು.

ಅಲ್ಲದೆ, ಭಾರತ 1961ರ ವಿಯೆನ್ನಾ ಒಪ್ಪಂದವನ್ನು ಉಲ್ಲಂಘನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಕೂಡಲೇ ಭಾರತೀಯ ರಾಯಭಾರಿಗಳು 48 ಗಂಟೆಯೊಳಗಾಗಿ ಪಾಕಿಸ್ತಾನ ತೊರೆಯುವಂತೆ ತಿಳಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT