ಉತ್ತರ ಪ್ರದೇಶ ರಾಜ್ಯಸಭಾ ಸಂಸದ ಚೌಧರಿ ಮುನವ್ವರ್ ಸಲೀಂ 
ದೇಶ

ದೇಶದ್ರೋಹ ಕೆಲಸ ಮಾಡುವವರನ್ನು ಬಂಧಿಸಿ: ಭದ್ರತಾ ಸಂಸ್ಥೆಗೆ ಬಿಜೆಪಿ ಒತ್ತಾಯ

ಸಮಾಜವಾದಿ ಪಕ್ಷದ ರಾಜ್ಯಸಭಾ ಸದಸ್ಯರ ಸಹಾಯಕರಾಗಿ ಕೆಲಸ ಮಾಡುತ್ತಿರುವ ವ್ಯಕ್ತಿಯನ್ನು ದೇಶದ್ರೋಹ...

ನವದೆಹಲಿ: ಸಮಾಜವಾದಿ ಪಕ್ಷದ ರಾಜ್ಯಸಭಾ ಸದಸ್ಯರ ಸಹಾಯಕರಾಗಿ ಕೆಲಸ ಮಾಡುತ್ತಿರುವ ವ್ಯಕ್ತಿಯನ್ನು ದೇಶದ್ರೋಹದ ಚಟುವಟಿಕೆ ಮೇಲೆ ಬಂಧಿಸಿರುವುದು ದುರದೃಷ್ಟಕರ ಎಂದು ಬಿಜೆಪಿ ಸಂಸದ ಸತ್ಯಪಾಲ್ ಸಿಂಗ್ ಹೇಳಿದ್ದಾರೆ. ಸಮಾಜವಾದಿ ಪಕ್ಷದ ಸಂಸದ ಚೌಧರಿ ಮುನವ್ವರ್ ಸಲೀಮ್ ಅವರ ಖಾಸಗಿ ಸಹಾಯಕರ ಬಂಧನ ಕುರಿತು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 
ದೇಶದ್ರೋಹಿ ಕೆಲಸದಲ್ಲಿ ತೊಡಗಿರುವ ಎಲ್ಲರನ್ನೂ ಅವರ ಸ್ಥಾನಮಾನ ಪರಿಗಣಿಸದೆ ಬಂಧಿಸಬೇಕೆಂದು ಭದ್ರತಾ ಸಂಸ್ಥೆಯನ್ನು ಅವರು ಒತ್ತಾಯಿಸಿದ್ದಾರೆ.ಸಂಸದರ ಕೆಳಗೆ ಕೆಲಸ ಮಾಡುವ ಒಬ್ಬರನ್ನು ಬಂಧಿಸುವುದು ನಿಜಕ್ಕೂ ದುರದೃಷ್ಟಕರ. ಈ ಸಂಬಂಧ ಮಾಧ್ಯಮಗಳಲ್ಲಿ ಬರುವ ವರದಿಗಳನ್ನೂ ಗಂಭೀರವಾಗಿ ಪರಿಗಣಿಸುತ್ತೇವೆ. ದೇಶದ್ರೋಹಿ ಪಿತೂರಿ ಕೆಲಸದಲ್ಲಿ ತೊಡಗಿರುವ ಎಲ್ಲರನ್ನೂ ಅವರ ಸ್ಥಾನಮಾನವನ್ನು ನೋಡದೆ ಬಂಧಿಸಬೇಕೆಂದು ಅವರು ಆಗ್ರಹಿಸಿದ್ದಾರೆ.
ಸಂಸತ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಕದ್ದು ಅವುಗಳನ್ನು ಪಾಕಿಸ್ತಾನದ ಗುಪ್ತಚರ ದಳ ಇಸಿಸ್ ಗೆ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಿನ್ನೆ ಸಲೀಂ ಅವರ ಖಾಸಗಿ ಸಹಾಯಕನನ್ನು ಪೊಲೀಸರು ಬಂಧಿಸಿದ್ದಾರೆ. ಪಾಕಿಸ್ತಾನದ ಹೈ ಕಮಿಷನ್ ಸಿಬ್ಬಂದಿ ಮೆಹಮ್ಮೂದ್ ಅಖ್ತರ್ ನಡೆಸುತ್ತಿರುವ ಬೇಹುಗಾರಿಕೆಗೆ ಫರ್ಹಾತ್ ಖಾನ್ ಮಾಹಿತಿ ಒದಗಿಸುತ್ತಿದ್ದ ಎನ್ನಲಾಗುತ್ತಿದೆ.
ತಮ್ಮ ಮೇಲಿನ ಆರೋಪವನ್ನು ಸಲೀಂ ನಿರಾಕರಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT