ಕೇರಳ: ಬೀದಿ ನಾಯಿಗಳನ್ನು ಕೊಂದರೆ ಚಿನ್ನದ ನಾಣ್ಯ ಬಹುಮಾನ! 
ದೇಶ

ಕೇರಳ: ಬೀದಿ ನಾಯಿಗಳನ್ನು ಕೊಂದರೆ ಚಿನ್ನದ ನಾಣ್ಯ ಬಹುಮಾನ!

ಅತಿ ಹೆಚ್ಚು ಬೀದಿ ನಾಯಿಗಳನ್ನು ಕೊಲ್ಲುವ ಸ್ಥಳೀಯ ಸಂಸ್ಥೆ ಅಧಿಕಾರಿಗಳಿಗೆ ಚಿನ್ನದ ನಾಣ್ಯಗಳನ್ನು ಬಹುಮಾನ ನೀಡುವುದಾಗಿ ಕೇರಳದ ಪ್ರಮುಖ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ ಘೋಷಿಸಿದೆ.

ತಿರುವನಂತಪುರಂ: ಅತಿ ಹೆಚ್ಚು ಬೀದಿ ನಾಯಿಗಳನ್ನು ಕೊಲ್ಲುವ ಸ್ಥಳೀಯ ಸಂಸ್ಥೆ ಅಧಿಕಾರಿಗಳಿಗೆ ಚಿನ್ನದ ನಾಣ್ಯಗಳನ್ನು ಬಹುಮಾನ ನೀಡುವುದಾಗಿ ಕೇರಳದ ಪ್ರಮುಖ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ ಘೋಷಿಸಿದೆ.  

ಡಿ.10 ರ ವರೆಗೆ ಗಡುವು ನೀಡಿ ಅತಿ ಹೆಚ್ಚು ಬೀದಿ ನಾಯಿಗಳನ್ನು ಕೊಳ್ಳಲಾಗುವ ಪ್ರದೇಶದ ಪಂಚಾಯ್ತಿ ಮುಖ್ಯಸ್ಥರಿಗೆ ಚಿನ್ನದ ನಾಣ್ಯಗಳನ್ನು ಬಹುಮಾನವಾಗಿ ನೀಡಲಾಗುತ್ತದೆ ಎಂದು ಹೇಳಿರುವ ಹಳೆ ವಿದ್ಯಾರ್ಥಿಗಳ ಸಂಘ, ಇತ್ತೀಚೆಗಷ್ಟೇ ಹಿಂಸಾತ್ಮಕ ನಾಯಿಗಳಿಂದ ರಕ್ಷಣೆ ಪಡೆಯುವುದಕ್ಕಾಗಿ ಸಬ್ಸಿಡಿ ದರದಲ್ಲಿ ಏರ್ ಗನ್ ಗಳನ್ನು ನೀಡುವುದಾಗಿ ಘೋಷಿಸಿತ್ತು. ಅಷ್ಟೇ ಅಲ್ಲದೆ ಜನರಿಗೆ ಉಪಟಳ ನೀಡುತ್ತಿರುವ ಬೀದಿ ನಾಯಿಗಳನ್ನು ಕೊಳ್ಳುವವರಿಗೆ ನಗದು ಬಹುಮಾನ ನೀಡುವುದಾಗಿಯೂ ಸೆಂಟ್ ಥಾಮಸ್ ಕಾಲೇಜ್ ನ ಹಳೆಯ ವಿದ್ಯಾರ್ಥಿಗಳ ಸಂಘಟನೆ ಹೇಳಿತ್ತು. ಕಳೆದ 4 ತಿಂಗಳಲ್ಲಿ 700 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಈ ಹಿನ್ನೆಲೆಯಲ್ಲಿ ಅತಿ ಹೆಚ್ಚು ಬೀದಿ ನಾಯಿಗಳನ್ನು ಕೊಂದರೆ ಚಿನ್ನದ ನಾಣ್ಯ ಬಹುಮಾನ ನೀಡುವುದಾಗಿ ಘೋಷಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT