ಬೇಹುಗಾರಿಕೆ ಪ್ರಕರಣ: ಪೊಲೀಸ್ ಕಸ್ಟಡಿಗೆ ಮುನ್ನಾವಾರ್ ಸಲೀಮ್ ಆಪ್ತ ಕಾರ್ಯದರ್ಶಿ 
ದೇಶ

ಬೇಹುಗಾರಿಕೆ ಪ್ರಕರಣ: ಪೊಲೀಸ್ ಕಸ್ಟಡಿಗೆ ಮುನ್ನಾವಾರ್ ಸಲೀಮ್ ಆಪ್ತ ಕಾರ್ಯದರ್ಶಿ

ಬೇಹುಗಾರಿಕೆ ಪ್ರಕರಣದಲ್ಲಿ ಬಂಧಿತನಾಗಿರುವ ಸಮಾಜವಾದಿ ಪಕ್ಷದ ಸಂಸದ ಮುನಬ್ಬಾರ್ ಆಪ್ತ ಕಾರ್ಯದರ್ಶಿ ಬಗ್ಗೆ ಅಧಿಕಾರಿಗಳು ಭಾನುವಾರ ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾರೆ...

ನವದೆಹಲಿ: ಬೇಹುಗಾರಿಕೆ ಪ್ರಕರಣದಲ್ಲಿ ಬಂಧಿತನಾಗಿರುವ ಸಮಾಜವಾದಿ ಪಕ್ಷದ ಸಂಸದ ಮುನಬ್ಬಾರ್ ಆಪ್ತ ಕಾರ್ಯದರ್ಶಿ ಬಗ್ಗೆ ಅಧಿಕಾರಿಗಳು ಭಾನುವಾರ ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾರೆ.

ಕಳೆದ 18 ವರ್ಷಗಳಿಂದಲೂ ಫರ್ಹತ್ ಖಾನ್ ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಎಂಬ ಸತ್ಯಾಂಶ ಇದೀಗ ಬೆಳಕಿಗೆ ಬಂದಿದೆ.

ಗೂಢಚಾರ್ಯೆ ನಡೆಸುತ್ತಿದ್ದ ಎಂದು ಹೇಳಿ ನಿನ್ನೆಯಷ್ಟೇ ಸಮಾಜವಾದಿ ಪಕ್ಷದ ರಾಜ್ಯಸಭಾ ಸದಸ್ಯ ಮುನಬ್ಬಾರ್ ಅವರ ಆಪ್ತ ಕಾರ್ಯದರ್ಶಿ ಫರ್ಹತ್ ಖಾನ್ ನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದರು. ವಿಚಾರಣೆ ವೇಳೆ ಫರ್ಹತ್ ಸಾಕಷ್ಟು ಸ್ಫೋಟಕ ಮಾಹಿತಿಗಳನ್ನು ಬಾಯ್ಬಿಟ್ಟಿದ್ದಾನೆಂದು ಹೇಳಲಾಗುತ್ತಿದೆ.

ಇಂದು ಬೆಳಿಗ್ಗೆ ಫರ್ಹತ್ ನನ್ನು ಪೊಲೀಸರು ದೆಹಲಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿರುವ ನ್ಯಾಯಾಲಯ ಫರ್ಹತ್ ನನ್ನು 10 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿದೆ ಎಂದು ತಿಳಿದುಬಂದಿದೆ.

ವಿಚಾರಣೆ ವೇಳೆ ಫರ್ಹತ್ ಖಾನ್ ಬಗೆಗಿನ ಸ್ಫೋಟಕ ಮಾಹಿತಿಗಳನ್ನು ತನಿಖಾಧಿಕಾರಿಗಳು ಬಹಿರಂಗಪಡಿಸಿದ್ದು, ಕಳೆದ 18 ವರ್ಷಗಳಿಂದಲೂ ಪಾಕಿಸ್ತಾನ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಈತ ಪಾಕಿಸ್ತಾನ ರಾಯಭಾರಿ ಮೆಹ್ಮೂದ್ ಅಖ್ತರ್ ನೊಂದಿಗೆ ನಿಕಟ ಸಂಪರ್ಕವನ್ನು ಹೊಂದಿದ್ದ. ಪಾಕಿಸ್ತಾನ ರಾಯಭಾರಿಗಳೊಂದಿಗೆ ಸಂಕೇತ ಪದಗಳೊಂದಿಗೆ ಮಾತನಾಡುತ್ತಿದ್ದ. ಈ ಮೂಲಕ ರಕ್ಷಣಾ ಇಲಾಖೆಯ ಗೌಪ್ಯ ಮಾಹಿತಿಗಳನ್ನು ಹಾಗೂ ದಾಖಲೆಗಳನ್ನು ಪಾಕಿಸ್ತಾನ ರಾಯಭಾರಿಗಳಿಗೆ ನೀಡುತ್ತಿದ್ದ ಎಂದು ಹೇಳಿದ್ದಾರೆ.

ಇದಲ್ಲದೆ, ಫರ್ಹತ್ ಪಾಕಿಸ್ತಾನ ಗುಪ್ತಚರ ಇಲಾಖೆಗಳೊಂದಿಗೆ ನಿರಂತರವಾಗಿ ಸಂಪರ್ಕ ಹೊಂದಿ, ಕಳೆದ 18 ವರ್ಷಗಳಿಂದಲೂ ಭಾರತದ ಗೌಪ್ಯ ಮಾಹಿತಿಗಳನ್ನು ರವಾನಿಸುತ್ತಿದ್ದ. ಪ್ರತೀಯೊಂದು ಮಾಹಿತಿ ಹಾಗೂ ದಾಖಲೆಗಳಿಗೂ ರು.2 ಲಕ್ಷ ಹಣವನ್ನು ಈತನಿಗೆ ಪಾಕಿಸ್ತಾನ ಗುಪ್ತಚರ ಇಲಾಖೆ ನೀಡುತ್ತಿತ್ತು ಎಂದು ಅಧಿಕಾರಿಗಳು ನ್ಯಾಯಾಧೀಶರ ಬಳಿ ಹೇಳಿದ್ದಾರೆ.

ಪ್ರಾಥಮಿಕ ತನಿಖೆ ವೇಳೆ ಫರ್ಹತ್ ಕೆಲ ಸತ್ಯಾಂಶಗಳನ್ನು ಬಾಯ್ಬಿಟ್ಟಿದ್ದಾನೆ. ಇನ್ನು ಮತ್ತಷ್ಟು ವಿಚಾರಣೆ ನಡೆಸುವ ಅಗತ್ಯವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT