ದೆಹಲಿ ಕೋರ್ಟ್ ನ 50 ನೇ ವಾರ್ಷಿಕೋತ್ಸವ ಆಚರಣೆ: ನ್ಯಾಯಾಧೀಶರಿಗೆ ಸ್ವಲ್ಪ ಮುಗುಳ್ನಗೆ ಬೀರಿ ಎಂದ ಪ್ರಧಾನಿ 
ದೇಶ

ದೆಹಲಿ ಕೋರ್ಟ್ ನ 50 ನೇ ವಾರ್ಷಿಕೋತ್ಸವ ಆಚರಣೆ: ನ್ಯಾಯಾಧೀಶರಿಗೆ ಸ್ವಲ್ಪ ಮುಗುಳ್ನಗೆ ಬೀರಿ ಎಂದ ಪ್ರಧಾನಿ

ದೆಹಲಿ ಹೈಕೋರ್ಟ್ ನ 50 ನೇ ವಾರ್ಷಿಕೋತ್ಸವವನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ನ್ಯಾಯಾಧೀಶರಿಗೆ ಮನಸ್ಸನ್ನು ಹಗುರಾಗಿಸಿಕೊಳ್ಳುವಂತೆ ಕರೆ ನೀಡಿದ್ದಾರೆ.

ನವದೆಹಲಿ: ದೆಹಲಿ ಹೈಕೋರ್ಟ್ ನ 50 ನೇ ವಾರ್ಷಿಕೋತ್ಸವವನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ನ್ಯಾಯಾಧೀಶರಿಗೆ ಮನಸ್ಸನ್ನು ಹಗುರಾಗಿಸಿಕೊಳ್ಳುವಂತೆ ಕರೆ ನೀಡಿದ್ದಾರೆ.  

ನ್ಯಾಯಾಂಗ ಎದುರಿಸುತ್ತಿರುವ ಸಮಸ್ಯೆಗಳನ್ನು ಸರಿಪಡಿಸಲು ಸಾಂಘಿಕ ಪ್ರಯತ್ನದ ಅಗತ್ಯವಿದೆ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ , 50 ನೇ ವಾರ್ಷಿಕೋತ್ಸವ ಆಚರಿಸುತ್ತಿದ್ದೇವೆ, cಎಂದು ನ್ಯಾಯಾಧೀಶರಲ್ಲಿ ಮನವಿ ಮಾಡಿದ್ದಾರೆ.

ನಂತರ ತಮ್ಮ ಭಾಷಣವನ್ನು ನ್ಯಾಯಾಂಗ ಎದುರಿಸುತ್ತಿರುವ ಸಮಸ್ಯೆಗಳತ್ತ ಕೇಂದ್ರೀಕರಿಸಿದ ಪ್ರಧಾನಿ, ನ್ಯಾಯಾಂಗ ಪ್ರಸ್ತುತ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಆದರೆ ಈ ಸವಾಲು ನಮ್ಮ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಇರುವ ಅವಕಾಶವಾಗಿದ್ದು, ಎಲ್ಲರು ಒಗ್ಗಟ್ಟಿನಿಂದ ಯತ್ನಿಸಿದರೆ, ಸಮಸ್ಯೆಗಳನ್ನು ಸವಾಲುಗಳನ್ನು ನಿವಾರಿಸಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದೆ ವೇಳೆ ಸಾಮಾನ್ಯ ಜನರಲ್ಲಿಯೂ ನ್ಯಾಯಾಂಗ ಅರಿವು ಮೂಡಬೇಕು ಎಂದಿರುವ ಪ್ರಧಾನಿ ಮೋದಿ, ಅತ್ಯಂತ ಕೆಳಸ್ಥರದಲ್ಲಿರುವವರನ್ನು ವ್ಯವಸ್ಥೆಯ ಮುಖ್ಯವಾಹಿನಿಗೆ ತರಬೇಕು ಎಂದು ಹೇಳಿದ್ದಾರೆ. ಇದೆ ವೇಳೆ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರನ್ನು ಸ್ಮರಿಸಿರುವ ಪ್ರಧಾನಿ,  ದೇಶದ ಮೊದಲ ಗೃಹ ಸಚಿವರು ದೇಶದ ಏಕತೆಗಾಗಿ ಪಟೇಲರು ನಿರ್ದೇಶನ ನೀಡಿದ್ದರು. ಅವರ ಕೊಡುಗೆಗಾಗಿ ಇಂದು ದೇಶವೇ ಅವರಿಗೆ ನಮಿಸುತ್ತದೆ ಎಂದಿದ್ದಾರೆ. ಕಾರ್ಯಕ್ರಮದಲ್ಲಿ ಸಿಜೆಐ ಟಿಎಸ್ ಠಾಕೂರ್, ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭಾಗವಹಿಸಿದ್ದರು.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT