ಸಾಂದರ್ಭಿಕ ಚಿತ್ರ 
ದೇಶ

ಸಿಮಿ ಸಂಘಟನೆಯ ಬಗ್ಗೆ ಕೆಲವು ಮಾಹಿತಿ

ಭೋಪಾಲ್ ನ ಕೇಂದ್ರ ಕಾರಾಗೃಹದ ಭದ್ರತಾ ಸಿಬ್ಬಂದಿಯನ್ನು ಕೊಂದು ತಪ್ಪಿಸಿಕೊಂಡು ಬಂದಿದ್ದ ಎಂಟು...

ಭೋಪಾಲ್ ನ ಕೇಂದ್ರ ಕಾರಾಗೃಹದ ಭದ್ರತಾ ಸಿಬ್ಬಂದಿಯನ್ನು ಕೊಂದು ತಪ್ಪಿಸಿಕೊಂಡು ಬಂದಿದ್ದ ಎಂಟು ಮಂದಿ ಸಿಮಿ ಸಂಘಟನೆಯ ಉಗ್ರಗಾಮಿಗಳು ಎನ್ ಕೌಂಟರ್ ನಲ್ಲಿ ಹತರಾಗಿದ್ದಾರೆ. ಈ ಮೂಲಕ ಇಂದು ಮತ್ತೆ ಸುದ್ದಿಯಾಗಿರುವ ಸಿಮಿ ಸಂಘಟನೆಯ ಬಗ್ಗೆ ತಿಳಿದುಕೊಳ್ಳೋಣ ಬನ್ನಿ.
-ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ ಮೆಂಟ್ ಆಫ್ ಇಂಡಿಯಾ ಒಂದು ನಿಷೇಧಿತ ಇಸ್ಲಾಮಿಕ್ ವಿದ್ಯಾರ್ಥಿ ಸಂಘಟನೆಯಾಗಿದ್ದು ಅದು ಉತ್ತರ ಪ್ರದೇಶದ ಆಲಿಘಡದಲ್ಲಿ 1977ರ ಏಪ್ರಿಲ್ 25ರಂದು ಅಸ್ತಿತ್ವಕ್ಕೆ ಬಂತು.
-ಆರಂಭದಲ್ಲಿ ಇದು ಜಮಾತ್-ಇ-ಇಸ್ಲಾಮಿ ಹಿಂದ್ ವಿದ್ಯಾರ್ಥಿ ಸಂಘಟನೆಯಾಗಿತ್ತು.
-ಮೊಹಮ್ಮದ್ ಅಹ್ಮದುಲ್ಲಾ ಸಿದ್ದಿಕಿ ಅದರ ಸ್ಥಾಪಕಾಧ್ಯಕ್ಷರು.
- ಸಿಮಿ, ಅಮೆರಿಕಾದಲ್ಲಿ ಸೆಪ್ಟೆಂಬರ್ 11, 2011ರಂದು ದಾಳಿ ನಡೆಸಿದ ಕೆಲವೇ ದಿನಗಳಲ್ಲಿ ಅದನ್ನು ನಿಷೇಧಿಸಲಾಗಿತ್ತು.
-2008ರಲ್ಲಿ ರಾಷ್ಟ್ರೀಯ ಭದ್ರತೆಯ ವಿಷಯವಾಗಿ ಅದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು.
-2014ರಲ್ಲಿ ಮತ್ತೆ 5 ವರ್ಷಗಳಿಗೆ ಕಾನೂನು ಬಾಹಿರ ಚಟುವಟಿಕೆ ಕಾಯ್ದೆಯಡಿ ಸಿಮಿ ಸಂಘಟನೆಯ ನಿಷೇಧ ಅವಧಿಯನ್ನು ವಿಸ್ತರಿಸಲಾಯಿತು. ಸಂಘಟನೆಯ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಯದಿದ್ದರೆ ದೇಶದ ಭದ್ರತೆ ಮತ್ತು ಸಂಘಟನೆಗೆ ತೊಂದರೆಯಿದೆ.
- ಭಯೋತ್ಪಾದಕರು ಮತ್ತು ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆ(ಟಾಡಾ ಕಾಯ್ದೆ), ಮಹಾರಾಷ್ಟ್ರ ಸಂಘಟಿತ ಅಪರಾಧ ಕಾಯ್ದೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ  ತಡೆ ಕಾಯ್ದೆ 1967ರ ಪ್ರಕಾರ ಸಿಮಿ ಸಂಘಟನೆಯ ಸದಸ್ಯರ ವಿರುದ್ಧ ಕೇಸು ದಾಖಲಿಸಬಹುದು.
- ಸಂಘಟನೆ ಔಪಚಾರಿಕವಾಗಿ ಕಣ್ಮರೆಯಾದರೂ ಕೂಡ ಹೊಸ ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಿದೆ.
-ಉತ್ತರ ಪ್ರದೇಶದಂತಹ ರಾಜ್ಯಗಳಲ್ಲಿ ಸಿಮಿ ಸಂಘಟನೆ ಇನ್ನೂ ಕೂಡ ಕಾರ್ಯನಿರ್ವಹಿಸುತ್ತಿದ್ದು ಅಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಭದ್ರವಾದ ನೆಲೆಯೂರಿದೆ ಎನ್ನಲಾಗುತ್ತಿದೆ.
- ಇಂಡಿಯನ್ ಮುಜಾಹಿದ್ದೀನ್ (ಐಎಮ್) ಸಿಮಿ ಸಂಘಟನೆಯ ಶಾಖೆಯಾಗಿದೆ ಎಂದು ಕೆಲವರು ಹೇಳಿದರೆ ಎರಡೂ ಗುಂಪುಗಳು ಸಂಬಂಧ ಹೊಂದಿದ್ದರೂ ಕೂಡ ಬೇರೆ ಬೇರೆ ಎಂದು ಇನ್ನು ಕೆಲವು ಸಂಘಟನೆಗಳು ಹೇಳುತ್ತವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT