ಝಾಕೀರ್ ನಾಯಕ್ 
ದೇಶ

ಬಂಧನ ಭೀತಿ: ತಂದೆಯ ಅಂತ್ಯ ಸಂಸ್ಕಾರಕ್ಕೂ ಬಾರದ ಝಾಕೀರ್ ನಾಯಕ್

ಬಂಧನ ಭೀತಿ ಎದುರಿಸುತ್ತಿರುವ ವಿವಾದಾತ್ಮಕ ಇಸ್ಲಾಂ ಧರ್ಮ ಭೋಧಕ ಝಾಕೀರ್ ನಾಯಕ್ ಅವರು ತಮ್ಮ ತಂದೆ ಅಬ್ದುಲ್ ಕರೀಂ...

ಮುಂಬೈ: ಬಂಧನ ಭೀತಿ ಎದುರಿಸುತ್ತಿರುವ ವಿವಾದಾತ್ಮಕ ಇಸ್ಲಾಂ ಧರ್ಮ ಭೋಧಕ ಝಾಕೀರ್ ನಾಯಕ್ ಅವರು ತಮ್ಮ ತಂದೆ ಅಬ್ದುಲ್ ಕರೀಂ ನಾಯಕ್ ಅವರ ಅಂತ್ಯ ಸಂಸ್ಕಾರದಲ್ಲೂ ಭಾಗವಹಿಸಲಿಲ್ಲ.
ಹಲವು ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದ 87 ವರ್ಷದ ಅಬ್ದುಲ್ ಕರೀಂ ನಾಯಕ್ ಅವರು ಭಾನುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದರು. 
ಮಹಾರಾಷ್ಟ್ರದ ರತ್ನಗಿರಿಯಲ್ಲಿ ಜನಿಸಿದ್ದ ಅಬ್ದುಲ್ ಕರೀಂ ನಾಯಕ್ ವೈದ್ಯರಾಗಿದ್ದರು. ಬಾಂಬೆ ಸೈಕಿಯಾಟ್ರಿಕ್ ಸೊಸೈಟಿಯಲ್ಲಿ  ಕೆಲಸ ನಿರ್ವಹಿಸಿದ್ದ ಅವರು, ಶಿಕ್ಷಣ ಕ್ಷೇತ್ರದಲ್ಲೂ ಕೆಲಸ ಮಾಡಿದ್ದರು.
ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಝಾಕೀರ್ ನಾಯಕ್ ಅವರು ಸದ್ಯ ಮಲೇಷಿಯಾದಲ್ಲಿ ನೆಲೆಸಿದ್ದು, ಬಂಧನ ಭೀತಿಯಿಂದ ತನ್ನ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿಲ್ಲ ಎನ್ನಲಾಗಿದೆ. 
ಕೇಂದ್ರ ಸರ್ಕಾರ ಹೊಸದಾಗಿ ಝಾಕೀರ್ ನಾಯಕ್ ವಿರುದ್ಧ ಯಾವುದೇ ಎಫ್ಐಆರ್ ದಾಖಲಿಸಿಲ್ಲ. ಆದರೆ ಅವರ ಎನ್ ಜಿಒ ಇಸ್ಲಾಮಿಕ್ ಸಂಶೋಧನಾ ಪ್ರತಿಷ್ಠಾನವನ್ನು ಕಾನೂನು ಬಾಹಿರ ಚಟುವಟಿಕೆಗಳ(ನಿಯಂತ್ರಣ) ಕಾಯ್ಡೆಯಡಿ ಕಾನೂನು ಬಾಹಿರ ಸಂಘಟನೆ ಎಂದು ಘೋಷಿಸಲು ನಿರ್ಧರಿಸಿದೆ.
ಜುಲೈ 1ರಂದು ನಡೆದ ಢಾಕಾ ದಾಳಿಯ ಉಗ್ರರು ಝಾಕೀರ್ ನಾಯಕ್ ಭಾಷಣಗಳಿಂದ ಪ್ರಚೋದಿತರಾಗಿದ್ದರು ಎಂಬ ಆರೋಪವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT