ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ 
ದೇಶ

ಮುಸ್ಲಿಂ ಕೈದಿಗಳೇ ಜೈಲಿನಿಂದ ಪರಾರಿಯಾಗುತ್ತಾರೆ, ಹಿಂದೂ ಕೈದಿಗಳೇಕಿಲ್ಲ: ದಿಗ್ವಿಜಯ್ ಸಿಂಗ್ ವ್ಯಂಗ್ಯ

ಜೈಲಿನಲ್ಲಿ ಮುಸ್ಲಿಂ ಕೈದಿಗಳೇ ಪರಾರಿಯಾಗುತ್ತಿದ್ದು, ಹಿಂದೂ ಕೈದಿಗಳು ಮಾತ್ರ ಏಕೆ ಪರಾರಿಯಾಗುತ್ತಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಮಂಗಳವಾರ...

ವಿಜಯವಾಡ: ಜೈಲಿನಲ್ಲಿ ಮುಸ್ಲಿಂ ಕೈದಿಗಳೇ ಪರಾರಿಯಾಗುತ್ತಿದ್ದು, ಹಿಂದೂ ಕೈದಿಗಳು ಮಾತ್ರ ಏಕೆ ಪರಾರಿಯಾಗುತ್ತಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಮಂಗಳವಾರ ವ್ಯಂಗ್ಯವಾಡಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವವರ ವಿರುದ್ಧ ನಾನು ಹೋರಾಟ ಮಾಡುತ್ತೇನೆ. ಮಧ್ಯಪ್ರದೇಶದಲ್ಲಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಿಮಿ ಉಗ್ರ ಸಂಘಟನೆ ಮೇಲೆ ನಿಷೇಧವನ್ನು ಹೇರಿದ್ದೆ. ನಂತರ ಉತ್ತರ ಪ್ರದೇಶದಲ್ಲಿ ರಾಜನಾಥ ಸಿಂಗ್ ಅವರು ಮುಖ್ಯಮಂತ್ರಿಯಾಗಿದ್ದರು.

ಆದರೆ, ಅವರು ಎಂದಿಗೂ ಸಿಮಿ ಉಗ್ರ ಸಂಘಟನೆ ಮೇಲೆ ನಿಷೇಧವನ್ನು ಹೇರಿರಲಿಲ್ಲ. ಗಲಭೆ ಪ್ರಕರಣಗಳಲ್ಲಿ ಸಿಮಿ ಜೊತೆಗೆ ಭಜರಂಗ ದಳ ಕೂಡ ಕೈಜೋಡಿಸಿತ್ತು. ಈ ಬಗ್ಗೆ ನನ್ನ ಬಳಿ ಸಾಕ್ಷ್ಯಾಧಾರಗಳಿವೆ. ಈ ಸಾಕ್ಷ್ಯಾಧಾರಗಳ ಮೇಲೆಯೇ ಎನ್'ಡಿಎ ಸಿಮಿ ಉಗ್ರ ಸಂಘಟನೆ ಮೇಲೆ ನಿಷೇಧವನ್ನು ಹೇರಿತ್ತು ಎಂದು ಹೇಳಿದ್ದಾರೆ.

ನನಗೆ ಸಿಮಿ ಮೇಲೆ ಆಗಲಿ ಅಥವಾ ಬಜರಂಗದಳದ ಮೇಲೆಯೇ ಆಗಲಿ ಪ್ರೀತಿಯಿಲ್ಲ. ಗಲಭೆ ಸೃಷ್ಟಿಸುವ ಹಾಗೂ ಧರ್ಮ ಹೆಸರಿನಲ್ಲಿ ರಾಜಕೀಯ ಮಾಡುವವರ ವಿರುದ್ಧ ನಾನಿದ್ದೇನೆ. ಇದರಲ್ಲಿ ಓವೈಸಿ ಕೂಡ ಇದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕುರ್ಚಿ ಕಾಳಗ: ಸಿದ್ದರಾಮಯ್ಯ, ಡಿಕೆಸಿ ಜತೆ ರಾಹಲ್ ಗಾಂಧಿ ಪ್ರತ್ಯೇಕ ಚರ್ಚೆ; ಕುತೂಹಲ ಮೂಡಿಸಿದೆ ಚುಟುಕು ಮಾತುಕತೆ! Video

ಇರಾನ್ ಪ್ರತಿಭಟನೆಯಲ್ಲಿ 2000 ಜನ ಸಾವು; ಇದಕ್ಕೆ ಉಗ್ರರು ಕಾರಣ ಎಂದ ಅಧಿಕಾರಿಗಳು

Toxic Teaserನಲ್ಲಿ 'ಟೂ ಮಚ್ ಸೆಕ್ಸ್' ಇದೆಯೇ? CBFCಗೆ ಮತ್ತೊಂದು ದೂರು!

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

IPL 2026: RCB ತವರು ಮೈದಾನ ಕೊನೆಗೂ ಬಹುತೇಕ ಫಿಕ್ಸ್, ಈ ಎರಡು ಮೈದಾನಗಳಲ್ಲೇ ಪಂದ್ಯ!

SCROLL FOR NEXT