ಪ್ರಧಾನಿ ನರೇಂದ್ರ ಮೋದಿ 
ದೇಶ

ಅಭಿವೃದ್ಧಿ ವಿಚಾರಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಉತ್ತರ ಪ್ರದೇಶ ಚುನಾವಣೆ ಎದುರಿಸಲಿದೆ: ನರೇಂದ್ರ ಮೋದಿ

ಮುಂದಿನ ವರ್ಷ ಉತ್ತರ ಪ್ರದೇಶ ಮತ್ತು ಇತರ 4 ರಾಜ್ಯಗಳಲ್ಲಿ ಚುನಾವಣೆಯನ್ನು ಬಿಜೆಪಿ ಅಭಿವೃದ್ಧಿ ವಿಷಯ...

ನವದೆಹಲಿ: ಮುಂದಿನ ವರ್ಷ ಉತ್ತರ ಪ್ರದೇಶ ಮತ್ತು ಇತರ 4 ರಾಜ್ಯಗಳಲ್ಲಿ ಚುನಾವಣೆಯನ್ನು ಬಿಜೆಪಿ ಅಭಿವೃದ್ಧಿ ವಿಷಯವನ್ನು ಮುಂದಿಟ್ಟುಕೊಂಡು ಎದುರಿಸಲಿದ್ದು, ಪಕ್ಷದ ಗಮನ ಉದ್ಯೋಗ, ಶಾಂತಿ, ಏಕತೆ ಮತ್ತು ಸಾಮಾಜಿಕ ನ್ಯಾಯದ ಮೇಲಿರುತ್ತದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು, ಅಭಿವೃದ್ಧಿಯ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ಉತ್ತರ ಪ್ರದೇಶದಲ್ಲಿ ಮತದಾರರು ಬಿಜೆಪಿಗೆ ಮತ ಹಾಕಲಿದ್ದು, ಪೂರ್ಣ ಬಹುಮತ ಸರ್ಕಾರವನ್ನು ಆಯ್ಕೆ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಂದಿನ ವರ್ಷ ಉತ್ತರ ಪ್ರದೇಶ, ಪಂಜಾಬ್, ಗೋವಾ, ಉತ್ತರಾಖಂಡ ಮತ್ತು ಮಣಿಪುರಗಳಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿಗೆ ಸಂಬಂಧಪಟ್ಟ ಹಾಗೆ ನಾವು ಅಭಿವೃದ್ಧಿ ಕೆಲಸಗಳನ್ನು ಇಟ್ಟುಕೊಂಡು ಚುನಾವಣೆಯನ್ನು ಎದುರಿಸುತ್ತೇವೆ. ಆಯಾ ರಾಜ್ಯಗಳ ರೈತರು, ಗ್ರಾಮಗಳು, ಉದ್ಯೋಗ ಸೃಷ್ಟಿ ಮೊದಲಾದ ವಿಷಯಗಳನ್ನಿಟ್ಟುಕೊಂಡು ನಾವು ಚುನಾವಣೆಯನ್ನು ಎದುರಿಸಲಿದ್ದು, ಸಾಮಾಜಿಕ ನ್ಯಾಯಕ್ಕಾಗಿ ನಾವು ಬದ್ಧವಾಗಿದ್ದೇವೆ ಎಂದು ಹೇಳಿದರು.
''ನಮ್ಮ ಗುರಿ ದೇಶದಲ್ಲಿ ಶಾಂತಿ, ಏಕತೆ ಮತ್ತು ಸಹೋದರತ್ವ ಕಾಪಾಡುವ ನಿಟ್ಟಿನಲ್ಲಿದೆ. ಈ ನಿಟ್ಟಿನಲ್ಲಿ ನಾವು ಕ್ರಮಗಳನ್ನು ಕೈಗೊಂಡು ಹೆಜ್ಜೆ ಮುಂದಿಡುತ್ತೇವೆ ಎಂದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ವೋಟು ಬ್ಯಾಂಕ್ ರಾಜಕಾರಣದ ವಾತಾವರಣವಿರಲಿಲ್ಲ. ಬದಲಾಗಿ ಅಭಿವೃದ್ಧಿ ರಾಜಕಾರಣದ ವಾತಾವರಣವಿತ್ತು.ಅಭಿವೃದ್ಧಿ ರಾಜಕಾರಣದತ್ತ ಸಮಾಜದ ಇಡೀ ವರ್ಗ ಬದಲಾಗಿದೆ ಎಂದು ಪ್ರಧಾನಿ ಹೇಳಿದರು.
''30 ವರ್ಷಗಳ ನಂತರ ನಮ್ಮ ಸಮಾಜದ ವರ್ಗವೊಂದು ಒಟ್ಟಾಗಿ ಬಹುಮತ ಸರ್ಕಾರವನ್ನು ಅಧಿಕಾರಕ್ಕೆ ತಂದಿದೆ. ಸಮಾಜದ ಇಡೀ ವರ್ಗ ಬದಲಾವಣೆ ತಂದಿದೆ. ಉತ್ತರ ಪ್ರದೇಶದ ಜನತೆ ಕೂಡ ತಮ್ಮ ರಾಜ್ಯದ ಬೆಳವಣಿಗೆ, ಅಭಿವೃದ್ಧಿಗಾಗಿ ಬಹುಮತ ಸರ್ಕಾರವನ್ನು ಅಧಿಕಾರಕ್ಕೆ ತರುತ್ತಾರೆ ಎಂಬ ನಂಬಿಕೆಯಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT