ಸಂಗ್ರಹ ಚಿತ್ರ 
ದೇಶ

ಕಾಶ್ಮೀರದ ಹಲವೆಡೆ ಮತ್ತೆ ಕರ್ಫ್ಯೂ ಜಾರಿ

ಶುಕ್ರವಾರ ಪಾರ್ಥನೆ ಹಿನ್ನೆಲೆಯಲ್ಲಿ ಕಾಶ್ಮೀರದ ಹಲವೆಡೆ ಅಧಿಕಾರಿಗಳು ಮತ್ತೆ ಕರ್ಫ್ಯೂ ಜಾರಿ ಮಾಡಿದ್ದಾರೆ...

ಶ್ರೀನಗರ: ಶುಕ್ರವಾರ ಪಾರ್ಥನೆ ಹಿನ್ನೆಲೆಯಲ್ಲಿ ಕಾಶ್ಮೀರದ ಹಲವೆಡೆ ಅಧಿಕಾರಿಗಳು ಮತ್ತೆ ಕರ್ಫ್ಯೂ ಜಾರಿ ಮಾಡಿದ್ದಾರೆ.

ಬುರ್ಹಾನ್ ವಾನಿ ಹತ್ಯೆ ಖಂಡಿಸಿ 50ಕ್ಕೂ ಹೆಚ್ಚು ದಿನಗಳ ಕಾಲ ಹಿಂಸಾಚಾರ ನಡೆದಿತ್ತು. ಇಂದಿಗೂ ಕಾಶ್ಮೀರದಲ್ಲಿ ಬೂದಿ ಮುಚ್ಚಿದ ಕೆಂಡದಂತೆಯೇ ವಾತಾವರಣ ಮುಂದುವರೆದಿದೆ.

ಶುಕ್ರವಾರ ಪಾರ್ಥನೆ ಹಿನ್ನೆಲೆಯಲ್ಲಿ ಈಗಾಗಲೇ ಮುಂಜಾಗ್ರತೆ ವಹಿಸಿರುವ ಅಧಿಕಾರಿಗಳು ಮತ್ತೆ ಯಾವುದೇ ಅಹಿತಕರ ಘಟನೆ ಸಂಭವಿಸಿದಂತೆ ಈಗಾಗಲೇ ಶ್ರೀನಗರ ಸೇರಿದಂತೆ ಹಲವೆಡೆ ಕರ್ಫ್ಯೂ ಜಾರಿ ಮಾಡಿದ್ದಾರೆ. ಅನಂತ್ನಾಗ್, ಪುಲ್ವಾಮ, ಕುಲ್ಗಾಮ್, ಸೋಫಿಯನ್, ಬಾರಾಮುಲ್ಲಾ ಮತ್ತು ಪಟ್ಟನ್ ಪ್ರದೇಶಗಳಲ್ಲಿ ಈಗಾಗಲೇ ಕರ್ಫ್ಯೂ ಜಾರಿ ಮಾಡಲಾಗಿದೆ.

ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಮುಖ್ಯಸ್ಥ ಬುರ್ಹಾನ್ ವಾನಿಯನ್ನು ಜುಲೈ8 ರಂದು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಬುರ್ಹಾನ್ ವಾನಿ ಹತ್ಯೆ ವಿರೋಧಿಸಿ ಕಾಶ್ಮೀರ ಪ್ರತ್ಯೇಕತಾವಾದಿಗಳು ಬಂದ್ ಗೆ ಕರೆ ನೀಡಿದ್ದರು. ಅದರ ಪರಿಣಾಮ ಕಾಶ್ಮೀರದಲ್ಲಿ ಹಿಂಸಾಚಾರ ಆರಂಭಗೊಂಡಿತ್ತು. ಪರಿಣಾಮ ಸಾಮಾನ್ಯ ಜನರು ಸಂಕಷ್ಟದಲ್ಲಿ ಜೀವನ ನಡೆಸುವಂತಾಗಿತ್ತು.

ಕಾಶ್ಮೀರದಲ್ಲಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಭದ್ರತಾ ಪಡೆಗಳು ಹಾಗೂ ಅಲ್ಲಿನ ಸರ್ಕಾರ ಹರಸಾಹಸ ಪಟ್ಟಿತ್ತು. ಇದರಂತೆ ಕೊನೆಗೂ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಅಧಿಕಾರಿಗಳು ಸಫಲರಾಗಿದ್ದರು. ಪರಿಸ್ಥಿತಿ ತಿಳಿಗೊಂಡ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದಷ್ಟೇ ಹಲವೆಡೆ ಕರ್ಫ್ಯೂವನ್ನು ಹಿಂಪಡೆಯಲಾಗಿತ್ತು. ಆದರೆ, ಇಂದು ಶುಕ್ರವಾಗಿದ್ದು, ಪ್ರಾರ್ಥನೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂಬ ಕಾರಣಕ್ಕೆ ಸೂಕ್ಷ್ಮ ಪ್ರದೇಶ ಸೇರಿದಂತೆ ಹಲವೆಡೆ ಮತ್ತೆ ಕರ್ಫ್ಯೂವನ್ನು ಜಾರಿ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT