ಮನೋಹರ್ ಪರಿಕ್ಕರ್ 
ದೇಶ

ನನ್ನನ್ನು ವಜಾಗೊಳಿಸಲು ನಿತಿನ್ ಗಡ್ಕರಿಗೆ ಪರಿಕ್ಕರ್ ಸೂಚಿಸಿದ್ದರು: ಉಚ್ಛಾಟಿತ ಆರ್ ಎಸ್ ಎಸ್ ಅಧ್ಯಕ್ಷ ಸುಭಾಷ್ ವೆಲಿಂಗ್ಕರ್

ಗೋವಾ ರಾಜ್ಯಕ್ಕೆ ಬಿಜೆಪಿಯಿಂದ ಚುನಾವಣಾ ಉಸ್ತುವಾರಿಯಾಗಿ ನೇಮಕಗೊಂಡ ಬೆನ್ನಲ್ಲೇ ನಿತಿನ್ ಗಡ್ಕರಿ ಅವರಿಗೆ ಇದ್ದ ಮೊದಲ ಕೆಲಸವೆಂದರೆ ಅದು ನನ್ನನ್ನು ವಜಾಗೊಳಿಸುವುದಾಗಿತ್ತು...

ಪಣಜಿ: ಗೋವಾ ರಾಜ್ಯಕ್ಕೆ ಬಿಜೆಪಿಯಿಂದ ಚುನಾವಣಾ ಉಸ್ತುವಾರಿಯಾಗಿ ನೇಮಕಗೊಂಡ ಬೆನ್ನಲ್ಲೇ ನಿತಿನ್ ಗಡ್ಕರಿ ಅವರಿಗೆ ಇದ್ದ ಮೊದಲ ಕೆಲಸವೆಂದರೆ ಅದು ನನ್ನನ್ನು ವಜಾಗೊಳಿಸುವುದಾಗಿತ್ತು ಎಂದು ಸುಭಾಷ್ ವೆಲಿಂಗ್ಕರ್ ಆರೋಪಿಸಿದ್ದಾರೆ.
 
ಗೋವಾದಲ್ಲಿ ಆರ್ ಎಸ್ ಎಸ್ ಗೆ ಪರ್ಯಾಯವಾಗಿ ಪ್ರಾರಂಭಿಸಿರುವ ಸಂಘಟನೆ ತನ್ನ ಕೆಲಸವನ್ನು ಮುಂದುವರೆಸಲಿದೆ ಎಂದು ಹೇಳಿರುವ ವೆಲಿಂಗ್ಕರ್, ಮುಂಬರುವ ವಿಧಾನಸಭಾ ಚುನಾವಣೆಗೆ ನಿತಿನ್ ಗಡ್ಕರಿ ಅವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಿದ ಬೆನ್ನಲ್ಲೇ ಅವರಿಗೆ ನನ್ನನ್ನು ವಜಾಗೊಳಿಸುವ ಕೆಲಸ ವಹಿಸಲಾಗಿತ್ತು ಇದಕ್ಕೆ ಮನೋಹರ್ ಪರಿಕ್ಕರ್ ಅವರ ಒತ್ತಡವೇ ಕಾರಣ ಎಂದು ವೆಲಿಂಗ್ಕರ್ ಆರೋಪಿಸಿದ್ದಾರೆ.
 
ತಮ್ಮನ್ನು ವಜಾಗೊಳಿಸಿರುವುದಕ್ಕೂ ಆರ್ ಎಸ್ ಎಸ್ ನ ಸರಸಂಘಚಾಲಕರಾದ ಮೋಹನ್ ಭಾಗವತ್ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ವೆಲಿಂಗ್ಕರ್ ಸ್ಪಷ್ಟಪಡಿಸಿದ್ದಾರೆ. ಇನ್ನು ಶಿಕ್ಷಣ ಮಾಧ್ಯಮದ ಸಂಬಂಧ ತಮ್ಮ ನಿಲುವಿಗೆ ಬೆಂಬಲ ನೀಡಿರುವ ಶಿವಸೇನೆಗೆ ಧನ್ಯವಾದ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT