ವಿಯೆಟ್ನಾಂ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಸುದ್ದಿಗೋಷ್ಠಿ 
ದೇಶ

ಭಾರತದಿಂದ ವಿಯೆಟ್ನಾಂ ಗೆ 500 ಮಿಲಿಯನ್ ಡಾಲರ್ ರಕ್ಷಣಾ ನೆರವು ಘೋಷಣೆ

ವಿಯೆಟ್ನಾಂನೊಂದಿಗೆ 12 ಒಪ್ಪಂದಗಳಿಗೆ ಸಹಿ ಹಾಕಿರುವ ಪ್ರಧಾನಿ ನರೇಂದ್ರ ಮೋದಿ ಆಗ್ನೇಯ ಏಷ್ಯಾ ರಾಷ್ಟ್ರಕ್ಕೆ ರಕ್ಷಣಾ ವಲಯದಲ್ಲಿ 500 ಮಿಲಿಯನ್ ಡಾಲರ್ ನೆರವು ಘೋಷಿಸಿದ್ದಾರೆ.

ಹನೋಯಿ: ವಿಯೆಟ್ನಾಂನೊಂದಿಗೆ 12 ಒಪ್ಪಂದಗಳಿಗೆ ಸಹಿ ಹಾಕಿರುವ ಪ್ರಧಾನಿ ನರೇಂದ್ರ ಮೋದಿ ಆಗ್ನೇಯ ಏಷ್ಯಾ ರಾಷ್ಟ್ರಕ್ಕೆ ರಕ್ಷಣಾ ವಲಯದಲ್ಲಿ 500 ಮಿಲಿಯನ್ ಡಾಲರ್ ನೆರವು ಘೋಷಿಸಿದ್ದಾರೆ.

ವಿಯೆಟ್ನಾಂ ನೊಂದಿಗೆ ರಕ್ಷಣಾ ಸಹಕಾರ ಒಪ್ಪಂದವನ್ನು ವೃದ್ಧಿಗೊಳಿಸುವುದಕ್ಕೆ ಸಹಕಾರಿಯಾಗುವ ಒಪ್ಪಂದ ಮಾಡಿಕೊಳ್ಳಲಾಗಿದ್ದು ಗಸ್ತು ದಳದ ದೋಣಿಗಳ ನಿರ್ಮಾಣಕ್ಕೆ ಸಂಬಂಧಿಸಿದ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಇನ್ನು ಉಭಯ ರಾಷ್ಟ್ರಗಳು ತಮ್ಮ ನಡುವಿನ ಸಂಬಂಧವನ್ನು ಕಾರ್ಯತಂತ್ರ ಪಾಲುದಾರಿಕೆಯಿಂದ ಸಮಗ್ರ ಕಾರ್ಯತಂತ್ರ ಪಾಲುದಾರಿಕೆಗೆ ನವೀಕರಣಗೊಳಿಸಿವೆ.

ದ್ವಿಪಕ್ಷೀಯ ಮಾತುಕತೆ ಬಳಿಕ ವಿಯೆಟ್ನಾಂ ಪ್ರಧಾನಿಯೊಂದಿಗೆ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಉಭಯ ರಾಷ್ಟ್ರಗಳು ರಕ್ಷಣಾ ವಲಯದಲ್ಲಿ ಸಹಕಾರವನ್ನು ವೃದ್ಧಿಗೊಳಿಸಲು, ಸಮಾನ ಉದ್ದೇಶವನ್ನು ಮುಂದುವರಿಸಲು ತೀರ್ಮಾನಿಸಿವೆ ಎಂದು ಹೇಳಿದ್ದಾರೆ.

ಕಡಲಕರೆಯಾಚೆಯ ಗಸ್ತು ದೋಣಿಗಳ ನಿರ್ಮಾಣ ಒಪ್ಪಂದದ ಭಾಗವಾಗಿದ್ದು, ರಕ್ಷಣಾ ವಲಯದಲ್ಲಿ ವಿಯೆಟ್ನಾಂ ಗೆ 500 ಮಿಲಿಯನ್ ಡಾಲರ್ ನಷ್ಟು ನೆರವು ಘೋಷಣೆ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ವಿಯೆಟ್ನಾಂ ವೇಗ ಆರ್ಥಿಕ ಅಭಿವೃದ್ಧಿ ಸಾಧಿಸುವ ರಾಷ್ಟ್ರಗಳಲ್ಲಿ ಒಂದಾಗಿದ್ದು, 1.25 ಬಿಲಿಯನ್ ಭಾರತೀಯರು ವಿಯೆಟ್ನಾಂ ನ ಅಭಿವೃದ್ಧಿ ಪಯಣದಲ್ಲಿ ಪಾಲುದಾರರಾಗಲು ಸಿದ್ಧರಿರುತ್ತಾರೆ ಎಂದು ಹೇಳಿದ್ದಾರೆ. ವಿಯೆಟ್ನಾಂ ನೊಂದಿಗೆ ಭಾರತದ ದ್ವಿಪಕ್ಷೀಯ ವ್ಯಾಪಾರ ಪ್ರಸ್ತುತ 7.8 ಬಿಲಿಯನ್ ಡಾಲರ್ ನಷ್ಟಿದ್ದು, 2020 ರ ವೆಳೆಗೆ 15 ಮಿಲಿಯನ್ ಡಾಲರ್ ನಷ್ಟಾಗುವ ಗುರಿ ಹೊಂದಲಾಗಿದೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT