ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ 
ದೇಶ

ಕಾಶ್ಮೀರ ವಿವಾದ: ಸರ್ವಪಕ್ಷ ಸಭೆಗೆ ಹುರಿಯತ್ ಸಂಘಟನೆಯನ್ನೂ ಆಹ್ವಾನಿಸಿ- ಯೆಚೂರಿ ಸಲಹೆ

ಕಾಶ್ಮೀರ ವಿವಾದ ಕುರಿತಂತೆ ನಡೆಯಲಿರುವ ಸರ್ವಪಕ್ಷ ಸಭೆಗೆ ಹುರಿಯತ್ ಸಂಘಟನೆಯನ್ನು ಆಹ್ವಾನಿಸುವಂತೆ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿಯವರು...

ನವದೆಹಲಿ: ಕಾಶ್ಮೀರ ವಿವಾದ ಕುರಿತಂತೆ ನಡೆಯಲಿರುವ ಸರ್ವಪಕ್ಷ ಸಭೆಗೆ ಹುರಿಯತ್ ಸಂಘಟನೆಯನ್ನು ಆಹ್ವಾನಿಸುವಂತೆ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿಯವರು ಶನಿವಾರ ಸಲಹೆ ನೀಡಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಕಾಶ್ಮೀರ ವಿವಾದ ಕುರಿತಂತೆ ಚರ್ಚೆ ನಡೆಸಲು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದಿದೆ. ಸರ್ವಪಕ್ಷ ಸಭೆ ವೇಳೆ ಹುರಿಯತ್ ಕಾನ್ಫರೆನ್ಸ್ ನ ನಾಯಕರೂ ಕೂಡ ಇರುವುದು ಉತ್ತಮ ಬೆಳವಣಿಗೆಯಾಗಿರಲಿದೆ. ಹೀಗಾಗಿ ಹುರಿಯತ್ ನಾಯಕರನ್ನು ಸರ್ಕಾರ ಆಹ್ವಾನಿಸಬೇಕಿದೆ ಎಂದಿದ್ದಾರೆ.

ಕಾಶ್ಮೀರದಲ್ಲಿರುವ ಜನತೆ ಮೇಲೆ ನಾವು ನಂಬಿಕೆಯನ್ನು ಇಡಬೇಕು. ಹೀಗಾಗಿ ಯಾವುದೇ ನಿಯಮಗಳನ್ನು ಹೇರದೆ ಸರ್ಕಾರ ಹುರಿಯತ್ ಸಂಘಟನೆಯನ್ನು ಆಹ್ವಾನಿಸಿ, ಅವರ ಪ್ರತಿಕ್ರಿಯೆಯನ್ನು ಕೇಳಬೇಕಿದೆ. ಅವರೊಂದಿಗೂ ಚರ್ಚೆ ನಡೆಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.

ಅಶಾಂತಿ, ಹಿಂಸಾಚಾರವನ್ನು ಕಂಡಿರುವ ಕಣಿವೆ ರಾಜ್ಯ ಕಾಶ್ಮೀರದಲ್ಲಿ ಶಾಂತಿ ತರುವ ನಿಟ್ಟಿನಲ್ಲಿ ವಿವಿಧ ವರ್ಗಗಳ ಜನರೊಂದಿಗೆ ಮಾತುಕತೆ ನಡೆಸಲು ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸರ್ವಪಕ್ಷ ನಿಯೋಗ ಸೆಪ್ಟೆಂಬರ್ 4ರಂದು ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲಿದೆ. ನಿಯೋಗ ಸೆಪ್ಟೆಂಬರ್ 4ರಂದು ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಗೃಹ ಸಚಿವರು ಮುಂದಾಳತ್ವ ವಹಿಸಲಿದ್ದಾರೆ

ಹಿಜ್ ಬುಲ್ ಮುಜಾಹಿದ್ದೀನ್ ಕಮಾಂಡರ್ ಬುರ್ಹಾನ್ ವಾನಿಯ ಹತ್ಯೆಯ ಬಳಿಕ ಕಾಶ್ಮೀರ ಕಣಿವೆ ವ್ಯಾಪಕ ಹಿಂಸಾಚಾರ, ಪ್ರತಿಭಟನೆ ಕಂಡಿದ್ದು, ವಿವಿಧ ವರ್ಗಗಳ ಜನರನ್ನು ಭೇಟಿ ಮಾಡಿ ಅವರನ್ನು ಸಮಾಧಾನಪಡಿಸಿ ಶಾಂತಿ ಸ್ಥಾಪಿಸಲು ನಿಯೋಗ ಭೇಟಿ ಮಾಡುವ ಉದ್ದೇಶ ಹೊಂದಿದೆ. ಈ ಸಂದರ್ಭದಲ್ಲಿ ಕಾಶ್ಮೀರದ ಪ್ರತ್ಯೇಕತಾವಾದಿ ಮುಖಂಡರನ್ನು ಮತ್ತು ಸಂಘಟನೆಗಳನ್ನು ಭೇಟಿ ಮಾಡಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT